ಬೆಂಗಳೂರು: ಆಟೋ ಪಾರ್ಕಿಂಗ್ (Auto Parking) ಮಾಡುವ ವಿಚಾರಕ್ಕೆ ಅಕ್ಕಪಕ್ಕದ ಮನೆಯವರ ನಡುವೆ ಶುರುವಾದ ಗಲಾಟೆಯೊಂದು ದೊಡ್ಡಮಟ್ಟದಲ್ಲಿ ಸದ್ದು ಮಾಡುತ್ತಿದೆ.
ಬೆಂಗಳೂರಿನ ಪ್ರಗತಿಪುರ ಕುಮಾರಸ್ವಾಮಿ ಬಡಾವಣೆಯಲ್ಲಿ ಆಟೋ ಪಾರ್ಕಿಂಗ್ ಮಾಡುವ ವಿಚಾರಕ್ಕೆ ಕುಮಾರ್ ಮತ್ತು ಸಯ್ಯದ್ ಎಂಬವರ ನಡುವೆ ಗಲಾಟೆ ನಡೆದಿದೆ. ಈ ಸಂಬಂಧ ಕುಮಾರಸ್ವಾಮಿ ಲೇಔಟ್ ಠಾಣೆಯಲ್ಲಿ (Kumaraswamy Layout Police) ಪ್ರಕರಣ ದಾಖಲಾಗಿದ್ದು, ಮೂವರನ್ನು ಪೊಲೀಸರು ಬಂಧಿಸಿದ್ದಾರೆ.
Ration Card News Update: ಏಪ್ರಿಲ್ 1 ರಿಂದ ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ
ಭಾನುವಾರ ರಾತ್ರಿ 8 ಗಂಟೆ ಸುಮಾರಿಗೆ ಘಟನೆ ನಡೆದಿದೆ. ಅನ್ಯಕೋಮಿನ ಆಟೋ ಚಾಲಕ ವೇಗವಾಗಿ ಬಂದು ತನ್ನ ಮನೆ ಮುಂದೆ ಆಟೋ ಪಾರ್ಕಿಂಗ್ ಮಾಡಿದ್ದೇನೆ. ಈ ವೇಳೆ ನೆರೆ ಮನೆಯವರು ಪ್ರಶ್ನೆ ಮಾಡಿದಾಗ ಇಬ್ಬರು ಅವಾಚ್ಯ ಶಬ್ದಗಳಿಂದ ಬೈದಾಡಿಕೊಂಡಿದ್ದಾರೆ. ಇದರೊಂದ ಕೋಪಗೊಂಡ ಆಟೋ ಚಾಲಕ, ಪಕ್ಕದಲ್ಲೇ ಇದ್ದ ಮಸೀದಿಗೆ ತೆರಳಿ ನಮಾಜ್ ಮುಗಿಸಿ ಹೊರ ಬರುತ್ತಿದ್ದವರಿಗೆ ವಿಚಾರ ಮುಟ್ಟಿಸಿದ್ದಾನೆ. ವಿಚಾರ ತಿಳಿಯುತ್ತಿದ್ದಂತೆ 20ಕ್ಕೂ ಹೆಚ್ಚು ಯುವಕರು ಘಟನಾ ಸ್ಥಳಕ್ಕೆ ದೌಡಾಯಿಸಿ, ಪ್ರಶ್ನೆ ಮಾಡಿದ ಕುಟುಂಬದ ಮೇಲೆ ಗಲಾಟೆಗೆ ಮುಂದಾಗಿದ್ದಾರೆ. ಈ ವೇಳೆ ಮನೆಯಲ್ಲಿದ್ದ ಮಹಿಳೆಯರ ಮೇಲೂ ಹಲ್ಲೆ ನಡೆಸಿದ್ದಾರೆ ಎಂದು ಹಲ್ಲೆಗೊಳಗಾದ ಸುಕುಮಾರ್ ಆರೋಪಿಸಿದ್ದಾರೆ.
ಗಲಾಟೆಯಲ್ಲಿ ಮೂವರು ಮಹಿಳೆಯರು, ಮೂವರು ಪುರುಷರು ಹಾಗೂ 5 ವರ್ಷದ ಮಗುವಿನ ಮೇಲೂ ದಾಳಿ ನಡೆಸಿದ್ದಾರೆ ಎನ್ನಲಾಗಿದೆ. ಘಟನೆ ಸಂಬಂಧ ಕುಮಾರಸ್ವಾಮಿ ಲೇಔಟ್ ಠಾಣೆಯಲ್ಲಿ ದೂರು ನೀಡಲಾಗಿತ್ತು. ಬಳಿಕ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಮೂವರನ್ನು ಬಂಧಿಸಿದ್ದಾರೆ