ಬೆಂಗಳೂರು: ಸಕ್ಕರೆ ನಾಡು ಮಂಡ್ಯ ಲೋಕಸಭಾ ಕ್ಷೇತ್ರವನ್ನು ಬಿಜೆಪಿ ಅಧಿಕೃತವಾಗಿ ಜೆಡಿಎಸ್ಗೆ ಬಿಟ್ಟು ಕೊಟ್ಟಿದೆ. ಇದೀಗ ಜೆಡಿಎಸ್ನಿಂದ ಮೈತ್ರಿ ಅಭ್ಯರ್ಥಿಯಾಗಿ ಹೆಚ್.ಡಿ ಕುಮಾರಸ್ವಾಮಿ ಅಥವಾ ನಿಖಿಲ್ ಕುಮಾರಸ್ವಾಮಿ ಇಬ್ಬರಲ್ಲಿ ಯಾರು ಸ್ಪರ್ಧೆ ಮಾಡ್ತಾರೆ ಅನ್ನೋ ಕುತೂಹಲಕ್ಕೆ ಇಂದೇ ತೆರೆ ಬೀಳುವ ಸಾಧ್ಯತೆ ಇದೆ.
ಚನ್ನಪಟ್ಟಣ ವಿಧಾನಸಭೆ ಕ್ಷೇತ್ರದ ಮುಖಂಡರ ಸಭೆ ಆರಂಭವಾಗಿದ್ದು ಮಾಜಿ ಮುಖ್ಯಮಂತ್ರಿಗಳಾದ ಶ್ರೀ HD ಕುಮಾರಸ್ವಾಮಿ ಹಾಗೂ ಯುವ ಜನತಾದಳ ರಾಜ್ಯಾಧ್ಯಕ್ಷರಾದ ನಿಖಿಲ್ ಕುಮಾರಸ್ವಾಮಿ ಅವರು ಭಾಗಿಯಾಗಿದ್ದು ಹಾಗೆ ಚನ್ನಪಟ್ಟಣ ಕ್ಷೇತ್ರದ ಅನೇಕ ಪ್ರಮುಖ ಮುಖಂಡರು ಉಪಸ್ಥಿತಿ
ಇಷ್ಟು ದಿನಗಳ ಕಾಲ ಜೆಡಿಎಸ್ ನಾಯಕರು ಮಂಡ್ಯ ಲೋಕಸಭಾ ಕ್ಷೇತ್ರದ ಬಿಜೆಪಿ-ಜೆಡಿಎಸ್ ಮೈತ್ರಿ ಟಿಕೆಟ್ ನಮಗೆ ಬೇಕು ಎಂದು ಒತ್ತಾಯಿಸುತ್ತಿದ್ದರು. ಮತ್ತೊಂದು ಕಡೆ ಹಾಲಿ ಸಂಸದೆ ಸುಮಲತಾ ಅಂಬರೀಶ್ ನನಗೆ ಸಿಗುತ್ತೆ ಎಂಬ ವಿಶ್ವಾಸದಲ್ಲಿದ್ದರು. ಇದೀಗ ಅಂತಿಮವಾಗಿ ಬಿಜೆಪಿ ಜೆಡಿಎಸ್ಗೆ ಮಂಡ್ಯವನ್ನು ಬಿಟ್ಟು ಕೊಟ್ಟಿರೋದಾಗಿ ಅಧಿಕೃತ ಆದೇಶ ಮಾಡಿದೆ. ಇದೀಗ ಜೆಡಿಎಸ್ನಿಂದ ಮೈತ್ರಿ ಅಭ್ಯರ್ಥಿ ಯಾರು ಎಂಬ ಪ್ರಶ್ನೆಗಳು ಎದ್ದಿವೆ.