ಬೆಂಗಳೂರು: ಪ್ರದೀಪ್ ಈಶ್ವರ್ಗೆ ಕೌಂಟರ್ ನೀಡಿದ ಸುಧಾಕರ್ ನಾನು ಇಂದು ದೇವಸ್ಥಾನಕ್ಕೆ ತೆರಳಿ ಪೂಜೆ ಮಾಡಿಸಿ ಬಂದಿದ್ದೇನೆ. ಅಂತವರ ಪ್ರಶ್ನೆಗೆ ಉತ್ತರ ಕೊಡಲ್ಲ ಎಂದ ಸುಧಾಕರ್ ಹೇಳಿದರು.
ಸುಧಾಕರ್ ಯಾವುದೇ ಹಗರಣ ಮಾಡಿಲ್ಲವೆಂದು ಪ್ರಮಾಣ ಮಾಡಲು ರೆಡಿ ಇದ್ದಾರಾ?: ಪ್ರದೀಪ್ ಈಶ್ವರ್
ಇಂದು ಕೆಪಿಸಿಸಿ ಕಚೇರಿಯಲ್ಲಿ ಶಾಸಕ ಪ್ರದೀಪ್ ಈಶ್ವರ್ ಸುದ್ದಿಗೋಷ್ಠಿ ನಡೆಸಿದ ಅವರು, ಡಾ.ಕೆ ಸುಧಾಕರ್ ಮತ ಹಾಕಿದರೆ ಪ್ರಜಾಪ್ರಭುತ್ವಕ್ಕೆ ಮಾರಕ ಸಾಮಾನ್ಯ ಜನರಿಗೆ ಸುಧಾಕರ್ ತೊಂದರೆ ಕೊಡ್ತಾರೆ ನಾಳೆ ನಂದಿ ಭೋಗ ನಂದೀಶ್ವರ ದೇವಸ್ಥಾನದಲ್ಲಿ ಯಾವುದೇ ಹಗರಣ ಮಾಡಿಲ್ಲ ಅಂತ ಪ್ರಮಾಣ ಮಾಡುವುದಕ್ಕೆ ರೆಡಿ ಇದ್ದಾರಾ ಸುಧಾಕರ್ ಯಾವುದೇ ಹಗರಣ ಮಾಡಿಲ್ಲ ಅಂತ ದೇವಸ್ಥಾನದಲ್ಲಿ ಪ್ರಮಾಣ ಮಾಡುವುದಕ್ಕೆ ರೆಡಿ ಇದ್ದಾರಾ? ಎಂದು ಪ್ರಶ್ನೆ ಮಾಡಿದ್ದರು.
Ration Card News Update: ಏಪ್ರಿಲ್ 1 ರಿಂದ ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ
ಶಾಸಕ ಎಸ್.ಆರ್ ವಿಶ್ವನಾಥ್ ಬಂಡಾಯ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಶಾಸಕ ವಿಶ್ವನಾಥ್ ಅವರ ಜೊತೆ ಮಾತನಾಡುತ್ತೇನೆ. ಅವರು ಹಿರಿಯರು, ಅವರ ಕ್ಷೇತ್ರದಲ್ಲಿ ಸಂಘಟನೆ ಮಾಡಿ ಭದ್ರಕೋಟೆ ಕಟ್ಟಿದ್ದಾರೆ. ನಾವಿಬ್ಬರು ಮೊದಲೇ ಮಾತಾಡಿಕೊಂಡಿದ್ದೇವೆ. ಯಾರಿಗೆ ಟಿಕೆಟ್ ಕೊಟ್ಟರೂ ಒಟ್ಟಾಗೆ ಕೆಲಸ ಮಾಡಬೇಕು. ಹೊರಗಡೆಯವರಿಗೆ ಟಿಕೆಟ್ ಕೊಡುವುದು ಬೇಡ ಎಂದು ಚರ್ಚಿಸಿದ್ದೆವು. ಅದಕ್ಕೆ ಹೈಕಮಾಂಡ್ ಮನ್ನಣೆ ಕೊಟ್ಟಿದೆ. ವಿಶ್ವನಾಥ್ ಪ್ರಬಲ ನಾಯಕರು. ಅವರ ಪಡೆ ಸಂಘಟನೆ ಉತ್ತಮವಾಗಿದೆ. ಪಕ್ಷಕ್ಕೆ ಪೂರಕವಾಗಿ ಅವರ ನಿರ್ಣಯ ಇರಲಿದೆ. ಅವರು ಪಕ್ಷದ ಪರ ಇದ್ದು, ನನಗೆ ಸಹಕಾರ ಕೊಡುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.