ತುಮಕೂರು:- ಇಲ್ಲಿನ ತುರುವೇಕೆರೆ ಮೈತ್ರಿ ಸಭೆಯಲ್ಲಿ ಜೆಡಿಎಸ್-ಬಿಜೆಪಿ ಕಾರ್ಯಕರ್ತರ ನಡುವೆ ವಾಕ್ಸಮರ ನಡೆದಿದೆ. ಬಿಜೆಪಿ ಹಾಗೂ ಜೆಡಿಎಸ್ ಕಾರ್ಯಕರ್ತರ ನಡುವೆ ವಾಗ್ವಾದ ಉಂಟಾಗಿದೆ.
ಸಭೆಯಲ್ಲಿ ಬಿಜೆಪಿ ಮುಖಂಡ ಕೊಂಡಜ್ಜಿ ವಿಶ್ವನಾಥ್ ಅಸಮಾಧಾನ ಹೊರ ಹಾಕಿದ್ದಾರೆ. ಕಳೆದ ಬಾರಿ ನಾನು ಸೋಲೋದಕ್ಕೆ ಕೊಂಡಜ್ಜಿ ವಿಶ್ವನಾಥ್ ಕೂಡ ಕಾರಣ ಎಂದು ಸಭೆಯ ಭಾಷಣದಲ್ಲಿ ಶಾಸಕ ಎಂ ಟಿ ಕೃಷ್ಣಪ್ಪ ಹೇಳಿದ್ದ. ಕೃಷ್ಣಪ್ಪ ಭಾಷಣ ಮುಗಿಯುತ್ತಿದ್ದನಂತೆ ಅದಕ್ಕೆ ಸಮಜಾಯಿಷಿ ನೀಡಲು ಕೊಂಡಜ್ಜಿ ವಿಶ್ವನಾಥ್ ಮುಂದಾಗಿದ್ದಾರೆ.
ಚಿತ್ರದುರ್ಗ: ಕಾಂಗ್ರೆಸ್ ಅಭ್ಯರ್ಥಿಯಾಗಿ ಬಿ ಎನ್ ಚಂದ್ರಪ್ಪ ಕಣಕ್ಕೆ – ಕಾರ್ಯಕರ್ತರ ಸಂಭ್ರಮ!
ಇದಕ್ಕೆ ಬೇಡ ಎಂದು ಸೋಮಣ್ಣ ಹೇಳಿದ್ದಾರೆ. ಈ ವೇಳೆ ಶಾಸಕ ಕೃಷ್ಣಪ್ಪ ವಿರುದ್ಧ ಕೊಂಡಜ್ಜಿ ವಿಶ್ವನಾಥ್ ಅಸಮಾಧಾನ ಹೊರ ಹಾಕಿದ್ದಾರೆ. ಈ ವೇಳೆ ವೇದಿಕೆ ಮುಂಭಾಗದಲ್ಲಿ ಇದ್ದ ಜೆಡಿಎಸ್ ಕಾರ್ಯಕರ್ತರಿಂದ ಆಕ್ಷೇಪ ವ್ಯಕ್ತಪಡಿಸಲಾಗಿದೆ.
ಅಣ್ಣ ಹೀಗಾದ್ರೆ ಬೇಡ ಬಾ ಅಣ್ಣ ಹೋಗೊಣ ಎಂದು ಶಾಸಕ ಕೃಷ್ಣಪ್ಪರನ್ನ ಸನ ಜೆಡಿಎಸ್ ಕಾರ್ಯಕರ್ತ ಸತೀಶ್ ಹೇಳಿದ್ದಾರೆ.
ತುಮಕೂರು ಜಿಲ್ಲೆ ತುರುವೇಕೆರೆ ಪಟ್ಟಣದಲ್ಲಿ ನಡೆಯುತ್ತಿರುವ ಬಿಜೆಪಿ ಜೆಡಿಎಸ್ ಪಕ್ಷದ ಸಮನ್ವಯ ಸಭೆಯಲ್ಲಿ ಅಸಮಾಧಾನ ಭುಗಿಲೆದ್ದಿದ್ದು, ಕಾರ್ಯಕರ್ತರ ವಾಗ್ವಾದ ಹಿನ್ನೆಲೆ ಸಭೆಯಲ್ಲಿ ಕೆಲಕಾಲ ಗೊಂದಲ ಉಂಟಾಗಿತ್ತು.