ಭಾರತೀಯ ಜನತಾ ಪಕ್ಷದ ರಾಜ್ಯಾಧ್ಯಕ್ಷರಾದ ಬಿ.ವೈ ವಿಜಯೇಂದ್ರರವರು ಮಾರ್ಚ್ 27ರಂದು ಮಡಿಕೇರಿಗೆ ಭೇಟಿ ನೀಡಿ ಜಿಲ್ಲಾ ಮಟ್ಟದ ಕಾರ್ಯಕರ್ತರ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಪಕ್ಷದ ಜಿಲ್ಲಾ ವಾಕ್ತರ ಸುಬ್ರಮಣ್ಯ ಉಪಾಧ್ಯಾಯ ತಿಳಿಸಿದ್ದಾರೆ. ಮಡಿಕೇರಿಯ ಕ್ರಿಸ್ತಲ್ ಕೋರ್ಟ್ ಸಭಾಂಗಣದಲ್ಲಿ ಬೆಳಿಗ್ಗೆ 10 ಗಂಟೆಗೆ ಸಭೆ ನಡೆಯಲಿದ್ದು,
ಆದಾಯ ತೆರಿಗೆದಾರರ ಗಮನಿಸಿ.. ಮಾ.31 ರೊಳಗೆ ಈ ಕೆಲಸ ಕಡ್ಡಾಯ.! ಇಲ್ಲಾಂದ್ರೆ ದಂಡ ಗ್ಯಾರಂಟಿ
ಮೈಸೂರು ಕೊಡಗು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯದುವೀರ್ ಸೇರಿದಂತೆ ರಾಜ್ಯ ಹಾಗೂ ಜಿಲ್ಲಾ ಮಟ್ಟದ ನಾಯಕರುಗಳು ಪಾಲ್ಗೊಳ್ಳಲಿದ್ದಾರೆ. ಬಿ.ವೈ ವಿಜಯೇಂದ್ರರವರು ರಾಜ್ಯದ್ಯಕ್ಷರಾಗಿ ಆಯ್ಕೆಯಾದ ನಂತರ ಇದೇ ಮೊದಲ ಬಾರಿಗೆ ಕೊಡಗು ಜಿಲ್ಲೆಗೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಅವರನ್ನು ಸಹಸ್ರಾರು ಸಂಖ್ಯೆ ಕಾರ್ಯಕರ್ತರು ಕುಶಾಲ್ನಗರದ ಕೊಪ್ಪ ಗೇಟು ಬಳಿ ಅದ್ದೂರಿಯಾಗಿ ಸ್ವಾಗತಿಸಲಿದ್ದಾರೆ. ವಿರಾಜಪೇಟೆ ಮಂಡಲ ಬಿಜೆಪಿ ವತಿಯಿಂದ ನೂರಾರು ಕಾರ್ಯಕರ್ತರು ಕುಶಾಲನಗರಕ್ಕೆ ತೆರಳಿ ಅವರನ್ನು ಬರಮಾಡಿಕೊಳ್ಳಲಿದ್ದಾರೆ ಎಂದು ಹೇಳಲಾಗಿದೆ.