ರಾಮನಗರ:– ಒಂದು ತಪ್ಪು ಮತ ಹಾಕಿದ್ರೆ ನಿಮಗೆ ಯಮ ಕಾಣಿಸ್ತಾನೆ ಎಂದು ಹೇಳುವ ಮೂಲಕ ಡಿಕೆ ಸುರೇಶ್ ಗೆ ಮುನಿರತ್ನ ಟಾಂಗ್ ಕೊಟ್ಟಿದ್ದಾರೆ.
ರಾಜಕಾರಣಕ್ಕೆ ಬಂದರೆ ಜನಸೇವೆ ಮಾಡಬೇಕು. ಡಾ.ಮಂಜುನಾಥ್ ಬಂದಿರೋದು ಸ್ವಾರ್ಥಕ್ಕಲ್ಲ, ಜನಸೇವೆಗೆ. ಬೇರೆಯವರಿಗೆ ಮತ ಹಾಕಿದರೆ ಅದು ಸ್ವಾರ್ಥಕ್ಕೆ ಹೋಗುತ್ತೆ. ಡಾ.ಮಂಜುನಾಥ್ ಅವರ ಸೇವೆ 140 ಕೋಟಿ ಜನತೆಗೆ ಬೇಕು. ಇದನ್ನು ಬರೆದಿಟ್ಟುಕೊಳ್ಳಿ. ಸೂರ್ಯ, ಚಂದ್ರ ಇರೋದು ಎಷ್ಟು ಸತ್ಯವೋ ಮೋದಿ ಮತ್ತೊಮ್ಮೆ ಪ್ರಧಾನಿ ಆಗೋದು ಅಷ್ಟೇ ಸತ್ಯ. ಡಾ.ಮಂಜುನಾಥ್ ಅವರು ಮೋದಿ ಸಂಪುಟದಲ್ಲಿ ಸಚಿವರಾಗೋದು ಅಷ್ಟೇ ಸತ್ಯ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಸ್ವರ್ಗಕ್ಕೆ ಹೋದರೆ ರಂಭೆ, ಊರ್ವಶಿ, ಮೇನಕೆ ನೋಡಬಹುದು. ನರಕ್ಕೆ ಯಾಕೆ ಹೋಗುತ್ತೀರಾ. ನಾನೇ ಕಠಾರಿವೀರ ಅಂತ ಒಂದು ಸಿನಿಮಾ ಮಾಡಿದ್ದೇನೆ. ಅದರಲ್ಲಿ ಸ್ವರ್ಗ, ನರಕ ಹೇಗಿರುತ್ತೆ ಅಂತ ನೋಡಿ. ಈ ಚುನಾವಣೆ ರಾಮ-ರಾವಣರ ಯುದ್ಧ. ನಿಮಗೆ ರಾಮಬೇಕಾ? ರಾವಣ ಬೇಕಾ? ನಾವು ಈ ರಾಮನನ್ನು ಪಾರ್ಲಿಮೆಂಟ್ಗೆ ಕಳುಹಿಸಬೇಕು. ಬಿಜೆಪಿ ಹೃದಯದಲ್ಲಿ ಜೆಡಿಎಸ್ ಇದೆ. ಮತ ಹಾಕುವಾಗ ಜೆಡಿಎಸ್ ಇಲ್ಲ ಎಂದು ಗೊಂದಲಕ್ಕೀಡಾಗಬೇಡಿ. ಮಂಜುನಾಥ್ ಹೃದಯದಲ್ಲಿ ಜೆಡಿಎಸ್ ಇದೆ. ಹಾಗಾಗಿ ಬಿಜೆಪಿ ಚಿಹ್ನೆಗೆ ಮತ ಹಾಕಿ ಎಂದರು