ಚಿಕ್ಕಮಗಳೂರು: ಲೋಕಸಭೆ ಚುನಾವಣೆಯನ್ನು ಗೆದ್ರೆ ಕನ್ನಡದಲ್ಲಿ ಪ್ರಮಾಣ ವಚನ ಪಡೆಯುತ್ತೇನೆ. 6 ತಿಂಗಳಲ್ಲೇ ಹಿಂದಿ ಕಲಿಯುವೆ. ರಾಜ್ಯದ ಪರವಾಗಿ ಭಾಷಣ ಮಾಡುವೆ ಎಂದು ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ. ಬಳಿಕ ‘ಕೋಟ ಶ್ರೀನಿವಾಸ ಪೂಜಾರಿಗೆ ಹಿಂದಿ ಬರೊಲ್ಲ‘ ಎಂಬ ಜಯಪ್ರಕಾಶ್ ಹೆಗ್ಡೆ ಹೇಳಿಕೆ ಬಗ್ಗೆ ಮಾತನಾಡಿದ ಕೋಟ ಅವರು, ” ಜಯಪ್ರಕಾಶ್ ಹೆಗ್ಡೆಯವರಿಗೆ ನನ್ನ ಮೇಲಿನ ಅಭಿಮಾನ, ಪ್ರೀತಿ ಇದೆ. ಅದಕ್ಕೆ ಮುಂದೆ ಮುಜುಗರ ಆಗಬಾರದು ಎಂಬ ದೃಷ್ಟಿಯಿಂದ ಹಾಗೆ ಹೇಳಿದ್ದಾರೆ ” ಎಂದರು.
ಜಯಪ್ರಕಾಶ್ ಹೆಗ್ಡೆಯವರಿಗೆ ನನ್ನ ಮೇಲಿನ ಪ್ರೀತಿ ಅರ್ಥವಾಗಿದೆ. ನಾನು ಪ್ರಮಾಣ ವಚನವನ್ನು ಕನ್ನಡದಲ್ಲೆ ತೆಗೆದುಕೊಳ್ಳುತ್ತೇನೆ. ಸದನಕ್ಕೆ ಪ್ರವೇಶ ಮಾಡಿದ ಆರು ತಿಂಗಳಲ್ಲಿ ಹಿಂದಿ ಕಲಿಯುತ್ತೇನೆ. ಹೆಗ್ಡೆಯವರಿಗೆ ಸಮಾಧಾನ ಆಗುವಷ್ಟು ಹಿಂದಿಯಲ್ಲಿ ಭಾಷಣ ಮಾಡಿ ಬರುತ್ತೇನೆ ” ಎಂದು ಸವಾಲು ಹಾಕಿದರು.
ಆದಾಯ ತೆರಿಗೆದಾರರ ಗಮನಿಸಿ.. ಮಾ.31 ರೊಳಗೆ ಈ ಕೆಲಸ ಕಡ್ಡಾಯ.! ಇಲ್ಲಾಂದ್ರೆ ದಂಡ ಗ್ಯಾರಂಟಿ
ರಾಷ್ಟ್ರ ಭಕ್ತರ ಗೆಲುವಿಗಾಗಿ ಬಿಜೆಪಿಗೆ ಮತ ನೀಡಿ ಎಂದು ಲೋಕಸಭೆ ಚುನಾವಣೆ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ಕೇಳಿಕೊಂಡರು. ಲೋಕಸಭೆ ಚುನಾವಣೆಯು ಭಾರತಕ್ಕೆ ಜೈ ಮತ್ತು ಪಾಕ್ಗೆ ಜೈ ಎನ್ನುವವರ ನಡುವಿನ ಸಂಘರ್ಷವಾಗಿದೆ. ಬಾಂಬ್ ಹಾಕುವವರನ್ನು ಬೆಂಬಲಿಸುವವರ ಮತ್ತು ರಾಷ್ಟ್ರ ಭಕ್ತರ ನಡುವಿನ ಸ್ಪರ್ಧೆಯಾಗಿದೆ ಎಂದರು.