ಬೆಂಗಳೂರು: ಜಾತ್ರೆ, ಉತ್ಸವ ಶುಭ ಸಮಾರಂಭಗಳಲ್ಲಿ ಕಳ್ಳತನ ಮಾಡುತ್ತಿದ್ದ ಇಬ್ಬರೂ ಮಹಿಳೆಯರನ್ನ ಪೊಲೀಸರು ಬಂಧಿಸಿದ್ದಾರೆ. ಹಾಗೆ ಬಂಧಿತರಿಂದ 14.9 ಲಕ್ಷ ಮೌಲ್ಯದ 233 ಗ್ರಾ ಚಿನ್ನಾಭರಣ ವಶಪಡಿಸಿಕೊಂಡಿದ್ದಾರೆ.
ರಾಜಾಜಿನಗರದಲ್ಲಿ ಶಿವರಾತ್ರಿ ಹಬ್ಬದ ದಿನ ಸುಬ್ರಮಣ್ಯ ಸ್ವಾಮಿ ದೇವಸ್ಥನಾಕ್ಕೆ ಹೋದಾಗ ಕಳ್ಳತನ ಮಾಡಿದ್ದು ಆ ನಂತರ ಮಹಿಳೆ ರಾಜಾಜಿನಗರ ಪೊಲೀಸ್ ಠಾಣೆಗೆ ಹೋಗಿ ದೂರು ನೀಡಿದ್ದರು ಬಳಿಕ ಪೊಲೀಸರು ಸಿಸಿಟಿವಿ ಪರಿಶೀಲನೆ ವೇಳೆ ಇಬ್ಬರು ಮಹಿಳೆಯರಿಂದ ಕೃತ್ಯವೆಸಗಿದ್ದು ಬಯಲಿಗೆ ಬಂದಿದೆ.
Illegal Borewells: ಬೆಂಗಳೂರಲ್ಲಿ ತಲೆ ಎತ್ತಿರುವ ಅಕ್ರಮ ಬೋರ್ವೆಲ್: ಜಲಮಂಡಳಿ ಅಧಿಕಾರಿಗಳು ಮಾಡಿದ್ದೇನು?
ಜಾತ್ರೆ ದೇವರ ಉತ್ಸವ ಶುಭ ಸಮಾರಂಗಳಿಗೆ ವಯಸ್ಸಾದ ಮಹಿಳೆಯರನ್ನ ಟಾರ್ಗೆಟ್ ಮಾಡಿ ಕಳ್ಳತನ ಮಾಡುತ್ತಿದ್ದ ಮಹಿಳೆಯರು ಈ ಹಿಂದೆ ಕಳ್ಳತನ ಪ್ರಕರಣಗಳಲ್ಲಿ ಜೈಲಿಗೆ ಹೋಗಿ ಬಂದಿದ್ದ ಮಹಿಳೆಯರು
ಈ ಬಗ್ಗೆ ರಾಜಾಜಿನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಹೆಚ್ಚಿನ ವಿಚಾರಣೆ ನಡೆಸುತ್ತಿರುವ ಪೊಲೀಸರು.