ಬೆಂಗಳೂರು : ರಾಜ್ಯದಲ್ಲಿ ಅಧಿಕಾರ ಹಂಚಿಕೆಯ ಕುರಿತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಫೋಟಕ ಹೇಳಿಕೆ ನೀಡಿದ್ದಾರೆ. ಈ ಹೇಳಿಕೆ ಸಿಎಂ ಸಿದ್ದರಾಮಯ್ಯಗೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ.
ಖಾಸಗಿ ವಾಹಿನಿಯ ಸಂದರ್ಶನದಲ್ಲಿ ಮುಖ್ಯಮಂತ್ರಿ ಹುದ್ದೆಯ ಕುರಿತ ಪ್ರಶ್ನೆಗೆ ಪ್ರತಿಕ್ರಿಯಿಸಿರುವ ಡಿ.ಕೆ. ಶಿವಕುಮಾರ್, ನಾನು ಸಿಎಂ ಆಗುತ್ತೇನೆ ಎಂದು ಹೇಳಿದ್ದಾರೆ.
Loksabha Election: ಯಡಿಯೂರಪ್ಪ ಆಪ್ತನಿಗೆ ಗಾಳ ಹಾಕಿದ ಸಿದ್ದರಾಮಯ್ಯ: ಯಾರದು ಅಂತೀರಾ?
ರಾಜಕಾರಣದಲ್ಲಿ ಏನು ಬೇಕಾದರೂ ನಡೆಯುತ್ತದೆ. ಯಾರಿಗೂ, ಯಾವುದೂ ಶಾಶ್ವತವಲ್ಲ ಎಂದು ತಿಳಿಸಿದ್ದಾರೆ. ಈ ಮೂಲಕ ನಾನು ಮುಖ್ಯಮಂತ್ರಿ ಹುದ್ದೆಯ ಆಕಾಂಕ್ಷಿ ಎಂಬುದನ್ನು ಶಿವಕುಮಾರ್ ಬಹಿರಂಗ ಪಡಿಸಿದ್ದಾರೆ.
ಇನ್ನೂ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಕೆಲ ಸಚಿವರು ಹಾಗೂ ಶಾಸಕರು ಅಧಿಕಾರ ಹಂಚಿಕೆ ಕುರಿತು ಬಹಿರಂಗ ಹೇಳಿಕೆ ನೀಡುತ್ತಲೇ ಇದ್ದಾರೆ. ಒಂದೆಡೆ, ಸ್ವತಃ ಸಿಎಂ ಸಿದ್ದರಾಮಯ್ಯ ಪುತ್ರ ಯತೀಂದ್ರ ಅವರು ಸಹ ತಮ್ಮ ತಂದೆಯೇ ಪೂರ್ಣಾವಧಿ ಸಿಎಂ ಎಂದು ಹೇಳಿದ್ದರು. ಇದೀಗ ರಾಜ್ಯದಲ್ಲಿ ಮತ್ತೊಮ್ಮೆ ಸಿಎಂ ಬದಲಾವಣೆ ಕೂಗು ಕೇಳಿ ಬಂದಿದೆ.