ದಾವಣಗೆರೆ:- ಎಂಪಿ ಟಿಕೆಟ್ ಸಿಗದೆ ಮುನಿಸಿಕೊಂಡಿರುವ ಶಿಷ್ಯ ರೇಣುಕಾಚಾರ್ಯ ಮುನಿಸು ಶಮನಗೊಳಿಸುವಲ್ಲಿ ಬಿಎಸ್ ವೈ ವಿಫಲವಾಗಿದ್ದಾರೆ.
ಮೈಸೂರಿನಲ್ಲಿ ಬಿಜೆಪಿಯ ಮತ್ತೊಂದು ವಿಕೆಟ್ ಪತನ – ಕಾಂಗ್ರೆಸ್ನತ್ತ ಮುಖ ಮಾಡಿದ ಕೋಟೆ ಶಿವಣ್ಣ !
ಕುಟುಂಬಕ್ಕೆ ಟಿಕೆಟ್ ನೀಡಬಾರದು ಎಂಬ ಸ್ಥಳೀಯ ಬಿಜೆಪಿ ನಾಯಕರ ವಿರೋಧದ ನಡುವೆಯೂ ಸಿದ್ದೇಶ್ವರ ಪತ್ನಿ ಗಾಯತ್ರಿ ಅವರಿಗೆ ಟಿಕೆಟ್ ನೀಡಲಾಗಿದೆ. ಇದು ಮಾಜಿ ಸಚಿವ ಎಂಪಿ ರೇಣುಕಾಚಾರ್ಯ ಸೇರಿದಂತೆ ಸ್ಥಳೀಯ ನಾಯಕರ ಕಣ್ಣು ಕೆಂಪಗಾಗಿಸಿದೆ. ಈ ವಿಚಾರವಾಗಿ ಇಂದು ಬಿಎಸ್ ಯಡಿಯೂರಪ್ಪ ಅವರು ತನ್ನ ಶಿಷ್ಯನ ಮುನಿಸು ಶಮನಕ್ಕೆ ಸಭೆ ನಡೆಸಿ ಮಾತುಕತೆ ನಡೆಸಿದರೂ ರೇಣುಕಾಚಾರ್ಯ ಅವರು ತೃಪ್ತರಾಗದೆ ಕೋಪದಿಂದಲೇ ಹೊರನಡೆದರು.
ಅಭ್ಯರ್ಥಿ ಆಯ್ಕೆ ವಿಚಾರದಲ್ಲಿ ದಾವಣಗೆರೆ ಬಿಜೆಪಿಯಲ್ಲಿ ಭಿನ್ನಮತ ಸ್ಫೋಟಗೊಂಡಿದೆ. ಹೀಗಾಗಿ ದಾವಣಗೆರೆ ನಗರದ ಹೊರ ವಲಯದ ಅಪೂರ್ವ ರೆಸಾರ್ಟನಲ್ಲಿ ಅಸಮಾಧಾನಿತ ನಾಯಕರ ಜೆತೆ ಯಡಿಯೂರಪ್ಪ ಅವರು ಸಭೆ ನಡೆಸಿದ್ದು, ಬಿಜೆಪಿ ಚುನಾವಣಾ ಉಸ್ತುವಾರಿ ರಾಧಾಮೋಹನ್ ದಾಸ್ ಉಪಸ್ಥಿತರಿದ್ದರು. ಈ ಸಭೆಗೆ ಎಂ.ಪಿ.ರೇಣುಕಾಚಾರ್ಯ ನೇತೃತ್ವದ ರೆಬಲ್ ತಂಡ ಕೂಡ ಭಾಗಿಯಾಗಿದೆ.
ರೆಬಲ್ ಬಿಜೆಪಿ ಸಭೆಗೆ ಹಾಲಿ ಸಂಸದ ಜಿಎಂ ಸಿದ್ದೇಶ್ವರ, ಮಾಜಿ ಸಚಿವ ಮುರಗೇಶ ನಿರಾಣಿ, ಮಾಜಿ ಶಾಸಕ ಎಸ್ ವಿ ರಾಮಚಂದ್ರ, ಎಚ್ ಪಿ ರಾಜೇಶ್ ಆಗಮಿಸಿದ್ದರು. ಆದರೆ, ನಿರಾಣಿಗೆ ಪ್ರವೇಶ ನಿರಾಕರಿಸಲಾಗಿದೆ. ಆದರೆ, ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ ಅವರು ಗೈರಾಗಿದ್ದಾರೆ.
ಗಾಯತ್ರಿಗೆ ದಾವಣಗೆರೆ ಬಿಜೆಪಿ ಟಿಕೆಟ್ ನೀಡಿದ್ದಕ್ಕೆ ಬೇಸರಗೊಂಡಿರುವ ಎಂ.ಪಿ.ರೇಣುಕಾಚಾರ್ಯ ಸೇರಿದಂತೆ ಪ್ರಮುಖರ ಜೊತೆ ಯಡಿಯೂರಪ್ಪ ಅವರು ಊಟ ಮಾಡಿದ್ದಾರೆ. ಬಳಿಕ ಸಿದ್ದೇಶ್ವರ ಮತ್ತು ಅವರ ಬೆಂಬಲಿಗರನ್ನು ಹೊರಗಿಟ್ಟು ರೆಬಲ್ ನಾಯಕರೊಂದಿಗೆ ಯಡಿಯೂರಪ್ಪ ಅವರು ಗೌಪ್ಯ ಸಭೆ ನಡೆಸಿದರು. ಎಂ.ಪಿ.ರೇಣುಕಾಚಾರ್ಯ, ಎಸ್.ಎ.ರವೀಂದ್ರನಾಥ್, ಕರುಣಾಕಾರ ರೆಡ್ಡಿ ಮತ್ತಿತರರ ಜೊತೆ ಬಿಜೆಪಿ ಚರ್ಚೆ ನಡೆಸಿದರು.
ಸಭೆಯ ಬಳಿಕ ಬಹುತೇಕ ರೆಬಲ್ ನಾಯಕರು ಮೌನಕ್ಕೆ ಶರಣಾಗಿದ್ದಾರೆ. ರೆಬಲ್ ತಂಡದ ನೇತೃತ್ವ ವಹಿಸಿದ್ದ ಮಾಜಿ ಸಚಿವ ಎಸ್ಎ ರವೀಂದ್ರನಾಥ ಅವರಿಗೆ ಯಡಿಯೂರಪ್ಪ ಅವರು ಚುನಾವಣೆ ಉಸ್ತುವಾರಿಯನ್ನಾಗಿ ನೇಮಿಸುವ ಮೂಲಕ ನೀರು ಹಾಕಿ ಉರಿಯುತ್ತಿರುವ ಬೆಂಕಿಯನ್ನು ಸ್ವಲ್ಪಮಟ್ಟಿಗೆ ತಣಿಸಿದ್ದಾರೆ.