ಮೈಸೂರು: ಮೈಸೂರು- ಕೊಡಗು ಲೋಕಸಭಾ ಕ್ಷೇತ್ರದ ಅಖಾಡ ರಂಗೇರಿದ್ದು, ಸಿದ್ದರಾಮಯ್ಯ ತವರಿಗೆ ಬಿ.ವೈ.ವಿಜಯೇಂದ್ರ ಎಂಟ್ರಿ ಕೊಟ್ಟಿದ್ದಾರೆ. ಇಂದು ಚಾಮುಂಡಿಬೆಟ್ಟಕ್ಕೆ ಆಗಮಿಸಿ ನಾಡ ದೇವತೆ ತಾಯಿ ಚಾಮುಂಡೇಶ್ವರಿ ದರ್ಶನ ಮಾಡಿ ವಿಶೇಷ ಪೂಜೆ ಸಲ್ಲಿಸಿದರು.
Cucumber: ಬೇಸಿಗೆಯಲ್ಲಿ ಸೌತೆಕಾಯಿ ತಿಂದರೆ ಇಷ್ಟೆಲ್ಲಾ ಲಾಭಗಳಿದ್ಯಾ..? ಇಲ್ಲಿದೆ ಫುಲ್ ಡೀಟೇಲ್ಸ್
ಬಳಿಕ ಗೋಪೂಜೆ ಮಾಡುವ ಮೂಲಕ ಪ್ರಚಾರಕ್ಕೆ ಬಿ.ವೈ ವಿಜಯೇಂದ್ರ ಚಾಲನೆ ನೀಡಿದರು. ಇನ್ನು ಇದೇ ವೇಳೆ ವಿಜಯೇಂದ್ರರಿಗೆ ಬಿಜೆಪಿ ಕಾರ್ಯಕರ್ತರು ಅದ್ದೂರಿಯಾಗಿ ಸ್ವಾಗತ ಕೋರಿದರು. ಈ ವೇಳೆ ನಗರಾಧ್ಯಕ್ಷ ಎಲ್.ನಾಗೇಂದ್ರ, ಚಾಮರಾಜನಗರ ಅಭ್ಯರ್ಥಿ ಎಸ್.ಬಾಲರಾಜು, ರಾಜ್ಯ ಉಪಾಧ್ಯಕ್ಷ ಎಂ.ರಾಜೇಂದ್ರ ಸೇರಿದಂತೆ ಇತರರು ಭಾಗಿಯಾಗಿದ್ದರು.