ಬಳ್ಳಾರಿ: ಕರ್ನಾಟಕದಲ್ಲಿ ಲೋಕಸಭಾ ಚುನಾವಣೆ ಕಾವು ಜೋರಾಗಿದೆ. ಕಾಂಗ್ರೆಸ್ಸನ್ನು ಸೋಲಿಸಲು ಬಿಜೆಪಿ, ಜೆಡಿಎಸ್ ಮೈತ್ರಿ ಮಾಡಿಕೊಂಡಿವೆ. ಬಿಜೆಪಿ ಈಗಾಗಲೇ ಬಹುತೇಕ ಎಲ್ಲಾ ಕ್ಷೇತ್ರಗಳ ಅಭ್ಯರ್ಥಿಗಳ ಘೋಷಣೆ ಮಾಡಿದೆ.
ಈ ಬೆನ್ನಲ್ಲೇ ಮಾಜಿ ಸಚಿವ ಶ್ರೀರಾಮುಲು ಅಧಿಕೃತ ಪ್ರಚಾರ ಆರಂಭಿಸಿದ್ದಾರೆ. ಬಳ್ಳಾರಿ ಗ್ರಾಮೀಣ ಕ್ಷೇತ್ರದಲ್ಲಿ ಪ್ರಚಾರಕ್ಕೀಳಿದ ಶ್ರೀರಾಮುಲು, ಹಲಕುಂದಿ ಸೇರಿದಂತೆ ಇತರೆ ಪ್ರದೇಶದಲ್ಲಿ ಭರ್ಜರಿ ಮತಯಾಚನೆ ಮಾಡಿದ್ದಾರೆ.