ಗದಗ: ಬಸವರಾಜ ಬೊಮ್ಮಾಯಿ ದಾವಣಗೆರೆ ಚಾರ್ಲಿ ಇದ್ದಂತೆ ಎಂದು ಗದಗನಲ್ಲಿ ಸಚಿವ ಹೆಚ್.ಕೆ.ಪಾಟೀಲ ವ್ಯಂಗ್ಯವಾಡಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕುಸ್ತಿಯಲ್ಲಿ ಬೊಮ್ಮಾಯಿ ಅವರು ದಾವಣಗೆರೆ ಚಾರ್ಲಿ ಇದ್ದರು. ಆದರೆ ಇದೀಗ ಮುದುಕರಾಗಿದ್ದಾರೆ. ಆದರೆ ಹೊಸ ಕುಸ್ತಿ ಪಟು ಬಿಟ್ಟಾಗ ಯಾರು ಗೆಲ್ತಾರೆ ಅನ್ನೋದು ಗೊತ್ತಾಗುತ್ತೆ. ದಾವಣಗೆರೆ ಚಾರ್ಲಿ ಜೊತೆಗೆ ಹೊಸ ಜಾಣ ಕುಸ್ತಿಪಟು ಇಂದು ಕಣದಲ್ಲಿ ಇದ್ದಾನೆ. ಹೀಗಾಗಿ ಆನಂದ ಗಡ್ಡದ್ದೇವರಮಠ ಗೆಲುವು ನಿಶ್ಚಿತ ಎಂದು ಹೇಳಿದರು.
ಇನ್ನೂ ಮಾಜಿ ಮುಖ್ಯಮಂತ್ರಿಗಳ ಹಿಂದೆ ದೊಡ್ಡದೊಂದು ಲಗೇಜ್ ಇದೆ..ದೊಡ್ಡ ಭಾರ ಇದೆ. ಅವರು ಜನರಿಗೆ ಏನು ಹೇಳುತ್ತಾರೋ ಗೊತ್ತಿಲ್ಲ.. ಮೋದಿ ಅಂತ ಹೇಳಿದಾಕ್ಷಣ 15 ಲಕ್ಷ ಆಪ್ ಕಿ ಅಕೌಂಟ್ ಗೆ ಪಂದ್ರಾಲಾಕ್ ಡಾಲೂಂಗಾ.. ಇದು ಜನರ ಮನಸ್ಸಿಗೆ ಒಮ್ಮೆಲೆ ಥಟ್ಟನೆ ಅಂತ ಬರುತ್ತದೆ.. ರೈತರಿಗೆ ಆದಾಯ ದುಪ್ಪಟ್ಟಾಗುತ್ತೆ ಅಂತ ಹೇಳಿದ್ರು.. ಯುವಕರಿಗೆ 2 ಕೋಟಿ ಉದ್ಯೋಗ ಸೃಷ್ಠಿ ಮಾಡ್ತಿವಿ ಅಂದಿದ್ರು… ಇವೆಲ್ಲ ಅವರ ಹಿಂದೆ ದೊಡ್ಡ ಭಾರಗಳಿವೆ. ಬಿಜೆಪಿಯ ಸುಳ್ಳು ಭರವಸೆಗಳಿಂದ ಬೊಮ್ಮಾಯಿ ಎದ್ದು ನಿಲ್ಲಲಾರದಷ್ಟು ಅನಾನುಕೂಲತೆ ಎದುರಿಸ್ತಿದಾರೆ ಎಂದು ಬೊಮ್ಮಾಯಿ ವಿರುದ್ಧ ಕಿಡಿ ಕಾರಿದರು.