ಮೈಸೂರು: ಮೈಸೂರು-ಕೊಡಗು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಎಂ.ಲಕ್ಷ್ಮಣ್ ವಿರುದ್ಧ ಎರಡು ಪ್ರಕರಣ ದಾಖಲಿಸಿದ್ದು, ಅವರನ್ನು ಜೈಲಿಗೆ ಕಳುಹಿಸದೇ ಬಿಡುವುದಿಲ್ಲಎಂದು ಸಂಸದ ಪ್ರತಾಪ್ ಸಿಂಹ ಹೇಳಿದ್ದಾರೆ. ”ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ, ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಅವರನ್ನು ಬಾಯಿಗೆ ಬಂದಂತೆ ನಿಂದಿಸಿದ ಲಕ್ಷ್ಮಣ್ ಅವರಿಗೆ ಈಗ ಒಕ್ಕಲಿಗ ಸಮುದಾಯ ನೆನಪಾಗಿದೆ.
47 ವರ್ಷಗಳ ನಂತರ ಸಮುದಾಯಕ್ಕೆ ಟಿಕೆಟ್ ಸಿಕ್ಕಿದ್ದು ತಮ್ಮನ್ನು ಗೆಲ್ಲಿಸುವಂತೆ ಮನವಿ ಮಾಡಿದ್ದಾರೆ,” ಎಂದು ಟೀಕಿಸಿದರು. ಮುಂದಿನ ದಿನಗಳಲ್ಲಿಕಾರ್ಯಕರ್ತರ ನಡುವೆಯೇ ಇದ್ದು ನೋವು ನಲಿವಿಗೆ ಸ್ಪಂದಿಸುತ್ತೇನೆ. ತನ್ಮೂಲಕ ನಾನು ಕಾರ್ಯಕರ್ತರೊಂದಿಗೆ ಒಡನಾಟ ಹೊಂದಿಲ್ಲ ಎಂಬ ಆಪಾದನೆಯಿಂದ ಹೊರ ಬರುತ್ತೇನೆ ಎಂದರು.
Cucumber: ಬೇಸಿಗೆಯಲ್ಲಿ ಸೌತೆಕಾಯಿ ತಿಂದರೆ ಇಷ್ಟೆಲ್ಲಾ ಲಾಭಗಳಿದ್ಯಾ..? ಇಲ್ಲಿದೆ ಫುಲ್ ಡೀಟೇಲ್ಸ್
ಮೈಸೂರು- ಕೊಡಗು ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಯದುವೀರ್ ಅವರನ್ನು ಗೆಲ್ಲಿಸಲು ಎಂಟು ಕ್ಷೇತ್ರದಲ್ಲಿ ನರಸಿಂಹರಾಜ ಕ್ಷೇತ್ರವನ್ನು ಹೊರತುಪಡಿಸಿ ಏಳು ಕ್ಷೇತ್ರದಲ್ಲಿ ತಲಾ 50 ಸಾವಿರ ಲೀಡ್ ತರಬೇಕು. ಕ್ಷೇತ್ರದಲ್ಲಿ 1300ಕ್ಕೂ ಹೆಚ್ಚು ಗ್ರಾಮಗಳಿವೆ. ಎಲ್ಲ ಕಡೆಗೂ ಯದುವೀರ್ ಅವರು ತೆರಳಿ ಮತಯಾಚನೆ ಮಾಡಲು ಸಾಧ್ಯವಾಗುವುದಿಲ್ಲ. ಹೀಗಾಗಿ, ಪಕ್ಷದ ಕಾರ್ಯಕರ್ತರೇ ಸಂಘಟನೆ ಮಾಡಿ ಪಕ್ಷಕ್ಕೆ ಮತ ಹಾಕಿಸಬೇಕು ಎಂದು ಮನವಿ ಮಾಡಿದರು.