ಬೆಂಗಳೂರು:- ಸಿಲಿಕಾನ್ ಸಿಟಿ ಬೆಂಗಳೂರಿನ ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತಿಬ್ಬರನ್ನು ಎನ್ಐಎ ವಶಕ್ಕೆ ಪಡೆದಿದೆ.
ಶಂಕಿತರ ಜೊತೆ ಸಂಪರ್ಕ ಹೊಂದಿರುವ ಹಿನ್ನೆಲೆಯಲ್ಲಿ ಮತ್ತಿಬ್ಬರನ್ನು ವಶಕ್ಕೆ ಪಡೆದಿದೆ. ಸದ್ಯ ವಶಕ್ಕೆ ಪಡೆಯಲಾಗಿರುವ ಇಬ್ಬರು ನಿಷೇಧಿತ ‘ಅಲ್ ಹಿಂದ್ ಟ್ರಸ್ಟ್’ ಜೊತೆ ನಂಟು ಹೊಂದಿದ್ದರು.
ಅಬ್ಬರದ ಬ್ಯಾಟಿಂಗ್ ನಡುವೆಯೂ RCBಯ ಈ ವಿಶೇಷ ದಾಖಲೆ ಮುರಿಯಲು SRH ವಿಫಲ!
ರಾಮೇಶ್ವರಂ ಕೆಫೆ ಸ್ಫೋಟ ಮತ್ತು ಹಿಂದಿನ ಕೆಲವು ಸ್ಫೋಟ ಪ್ರಕರಣಗಳ ನಡುವೆ ಸಾಮ್ಯತೆ ಇರುವುದರಿಂದ ಹಳೇ ಸ್ಫೋಟ ಪ್ರಕರಣಗಳಲ್ಲಿ ಶಾಮೀಲಾದ ಹಲವರ ಮೇಲೆ ಎನ್ಐ ನಿಗಾ ಇರಿಸಿದೆ. ಈಗಾಗಲೇ ಜೈಲಿನಲ್ಲಿರುವ ಹಲವರನ್ನು ವಿಚಾರಣೆಗೆ ಒಳಪಡಿಸಿದ್ದ ಎನ್ಐಎ, ತಲೆಮರೆಸಿಕೊಂಡಿರುವ ಇನ್ನೂ ಹಲವರ ಮೇಲೆ ಕಣ್ಣಿಟ್ಟಿದೆ. ಶಂಕಿತರಿಗೆ ಪ್ರತ್ಯಕ್ಷ, ಪರೋಕ್ಷವಾಗಿ ನೆರವು ನೀಡಿದವರ ಮೇಲೂ ನಿಗಾ ಇಟ್ಟಿದೆ.
ಸದ್ಯ ಉಗ್ರ ಚಟುವಟಿಕೆಗಳಿಗೆ ನೆರವು ನೀಡಿದ ಆರೋಪ ಎದುರಿಸುತ್ತಿರುವವರನ್ನು ಪತ್ತೆ ಹಚ್ಚಿ ವಿಚಾರಣೆ ನಡೆಸಲಾಗುತ್ತಿದೆ. ಶಂಕಿತ ವ್ಯಕ್ತಿಗಳಿಂದ ಸ್ಫೋಟ ನಡೆಸಿದವರ ಬಗ್ಗೆ ಸುಳಿವು ಸಿಗುವ ಸಾಧ್ಯತೆ ಇದೆ. ತಾಂತ್ರಿಕವಾಗಿ ಅಥವಾ ಮೌಖಿಕವಾಗಿ ಮಾಹಿತಿ ಲಭ್ಯವಾಗುವ ಸಾಧ್ಯತೆ ಇದೆ. ಹೀಗಾಗಿ ಈ ವಿಧಾನದಲ್ಲಿ ತನಿಖೆ ಮುಂದುವರಿಸಿಕೊಂಡು ಹೋಗಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.
ಇನ್ನು ರಾಮೇಶ್ವರಂ ಕೆಫೆ ಸ್ಫೋಟ ಸಂಬಂಧ ಎನ್ಐಎ ಅಧಿಕಾರಿಗಳು ಬುಧವಾರ ಬೆಂಗಳೂರಿನ ಐದು ಕಡೆ, ಶಿವಮೊಗ್ಗ ಜಿಲ್ಲೆಯ 15 ಸ್ಥಳಗಳಲ್ಲಿ ಹಾಗೂ ತಮಿಳುನಾಡಿನ ಚೆನ್ನೈಯ ಆರು ಸ್ಥಳಗಳಲ್ಲಿ ದಾಳಿ ನಡೆಸಿ ಶೋಧ ಕಾರ್ಯ ನಡೆಸಿದ್ದರು.