ಬೆಂಗಳೂರು:-ತನ್ನ ಬಸ್ ಚಾಲಕರಿಗೆ ಡಬಲ್ ಡ್ಯೂಟಿಯಿಂದ KSRTC ಮುಕ್ತಿ ನೀಡಿದೆ. ಅಲ್ಲದೆ, ವಿಶ್ರಾಂತಿ ಪಡೆಯುವುದು ಕಡ್ಡಾಯ ಎಂದು ಆದೇಶಿಸಲಾಗಿದೆ.
ಇಂದಿನಿಂದ ರಾತ್ರಿ ಮತ್ತು ದೂರದ ಪ್ರಯಾಣದ ನಂತರ ಚಾಲಕರು ವಿಶ್ರಾಂತಿ ಪಡೆಯುವುದನ್ನು ಕಡ್ಡಾಯಗೊಳಿಸಲಾಗಿದೆ. ಎಂಟು ಗಂಟೆಗಳಿಗಿಂತ ಹೆಚ್ಚು ಡ್ಯೂಟಿ ಮಾಡಿಸುವಂತಿಲ್ಲ. 8 ಗಂಟೆಗಿಂತ ಅಧಿಕ ಮತ್ತು ರಾತ್ರಿ ವೇಳೆ ಹೆಚ್ಚುವರಿ ಡ್ಯೂಟಿ ಮಾಡಿದರೆ ನಾಲ್ಕೈದು ಗಂಟೆಗಳ ಕಾಲ ವಿಶ್ರಾಂತಿಗೆ ಅವಕಾಶ ನೀಡಬೇಕು. ವಾರದಲ್ಲಿ ಕೆಲಸದ ಅವಧಿ 48 ಗಂಟೆ ದಾಟುವಂತಿಲ್ಲ ಎಂದು ಸೂಚಿಸಲಾಗಿದೆ.
ಕೀಟನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ತಮಿಳುನಾಡು ಸಂಸದ ಗಣೇಶಮೂರ್ತಿ ನಿಧನ!
ಕೆಎಸ್ಆರ್ಟಿಸಿ ಬಸ್ಗಳಿಂದ ಅಪಘಾತ ಪ್ರಕರಣಗಳು ಹೆಚ್ಚಾಗುತ್ತಿದೆ. ಇದಕ್ಕೆ ಕಾರಣ ಏನೆಂಬುದನ್ನು ಪತ್ತೆಹಚ್ಚಲು ಸಮಿತಿ ರಚನೆ ಮಾಡಲಾಗಿತ್ತು. ಅದರಂತೆ ಡಬಲ್ ಡ್ಯೂಟಿ ಮತ್ತು ರಾತ್ರಿ ವಿಶ್ರಾಂತಿಯನ್ನು ನೀಡದಿರುವುದರಿಂದ ನಿದ್ದೆಗೆಟ್ಟು ಬಸ್ ಚಲಾಯಿಸಲು ಸಾಧ್ಯವಾಗದೆ ಅಪಘಾತಗಳು ಸಂಭವಿಸುತ್ತಿವೆ ಎಂದು ತಿಳಿದುಬಂದಿದೆ. ಈ ಸಂಬಂಧ ಸಮಿತಿಯು ಕೆಎಸ್ಆರ್ಟಿಸಿಗೆ ವರದಿ ಸಲ್ಲಿಸಿತ್ತು.
ಇದರ ಬೆನ್ನಲ್ಲೇ, ವರದಿ ಆಧರಿಸಿ ಕೆಎಸ್ಆರ್ಟಿಸಿ ಬಸ್ ಚಾಲಕರಿಗೆ ಡಬಲ್ ಡ್ಯೂಟಿಗೆ ಬ್ರೇಕ್ ಹಾಕಿ ವಿಶ್ರಾಂತಿಗೆ ಅವಕಾಶ ನೀಡಲಾಗಿದೆ.