ಮೈಸೂರು: ರಾಜ್ಯದ ಇತಿಹಾಸದಲ್ಲೇ ಮೊದಲ ಬಾರಿಗೆ 6 ಮಂದಿ ಮಹಿಳೆಯರನ್ನು ಕಣಕ್ಕಿಳಿಸುತ್ತಿದ್ದೇವೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದರು. ನಗರದಲ್ಲಿ ಮಾತನಾಡಿದ ಅವರು, ಈ ಬಾರಿಯ ಧರ್ಮಯುದ್ಧ ಆರಂಭವಾಗುವ ಮುನ್ನ ನಾನು ರಾಜ್ಯದ ವಿವಿಧ ಪವಿತ್ರ ದೇವಾಲಯಗಳಿಗೆ ಭೇಟಿ ನೀಡಿ ಪ್ರಾರ್ಥನೆ ಮಾಡಿಕೊಂಡು ಇಲ್ಲಿಗೆ ಬಂದಿದ್ದೇನೆ.
ರಾಜ್ಯದ ಇತಿಹಾಸದಲ್ಲೇ ಮೊದಲ ಬಾರಿಗೆ 6 ಮಂದಿ ಮಹಿಳೆಯರನ್ನು ಕಣಕ್ಕಿಳಿಸುತ್ತಿದ್ದೇವೆ. ತಾಯಿ ಚಾಮುಂಡಿ ಈ ನಾಡಿನ ದೇವತೆ. ಆಕೆಯ ಆಶೀರ್ವಾದದಿಂದ ನಾವು 136 ಸೀಟುಗಳನ್ನು ಗೆದ್ದು ಜನರ ಸೇವೆ ಮಾಡುತ್ತಿದ್ದೇವೆ ” ಎಂದು ಡಿಕೆಶಿ ಹೇಳಿದ್ದಾರೆ.
ವಾಸ್ತು ಪ್ರಕಾರ ಮನೆಯಲ್ಲಿ ಬಿದಿರುಗಳನ್ನು ಈ ರೀತಿಯಾಗಿ ಇಟ್ಟುಕೊಂಡರೆ ಅದೃಷ್ಟವಂತೆ.!
ನಾವು ಮೈಸೂರಿನಲ್ಲಿ ಲಕ್ಷ್ಮಣ್ ಅವರಿಗೆ ಟಿಕೆಟ್ ನೀಡಿದ್ದೇವೆ. ಅವರು ಯಾರು? ಪಕ್ಷದ ಧ್ವಜ ಹಿಡಿದು ಪಕ್ಷದ ಪರವಾಗಿ ತಮ್ಮ ಧ್ವನಿ ಎತ್ತಿಕೊಂಡು ಬಂದಿದ್ದಾರೆ. ಇಲ್ಲಿ ಲಕ್ಷ್ಮಣ್ ಅವರು ಮಾತ್ರವಲ್ಲ. ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ್ ಅವರು ಕೂಡ ಅಭ್ಯರ್ಥಿ, ನಿಮಗೆ ನೀವೇ ಅಭ್ಯರ್ಥಿ ಎಂದು ಭಾವಿಸಿ ಕೆಲಸ ಮಾಡಿ. ನಾವೆಲ್ಲ ಒಗ್ಗಟ್ಟಾಗಿ ಇವರ ಕೈ ಬಲಪಡಿಸೋಣ ಎಂದು ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.