ದೊಡ್ಡಬಳ್ಳಾಪುರ: ಸಚಿವ ಕೆ.ಹೆಚ್.ಮುನಿಯಪ್ಪ ವಿರುದ್ಧ ಅವಹೇಳಕಾರಿ ಹೇಳಿಕೆ ನೀಡಿದ ನಸೀರ್ ಸಾಬ್ ಮತ್ತು ಕೋಲಾರ ಕಾಂಗ್ರೆಸ್ ಟಿಕೆಟ್ ತಪ್ಪಿಸಲು ಷಡ್ಯಂತ್ರ ನಡೆಸುತ್ತಿರುವರ ಶಾಸಕರ ವಿರುದ್ಧ ಮಾದಿಗ ಸಮುದಾಯ ಪ್ರತಿಭಟನೆ ನಡೆಸಿದರು. ದೊಡ್ಡಬಳ್ಳಾಪುರ ನಗರದ ಪ್ರವಾಸಿ ಮಂದಿರದಲ್ಲಿ ಮಾದಿಗ ಸಮುದಾಯ ಮುಖಂಡರು ಪ್ರತಿಭಟನೆ ನಡೆಸಿದರು.. ಕೆ.ಹೆಚ್. ಮುನಿಯಪ್ಪ ವಿರುದ್ಧ ಅವಹೇಳಕಾರಿ ಹೇಳಿಕೆ ನೀಡಿದ ನಸೀರ್ ಅಹಮ್ಮದ್ ವಿರುದ್ಧ ದಿಕ್ಕಾರ ಕೂಗಿ ಪ್ರತಿಭಟನೆ ಮಾಡಿದ್ದಾರೆ.
ಮಾದಿಗ ಸಮುದಾಯ ಮುಖಂಡರಾದ ರಾಮಕೃಷ್ಣಪ್ಪ ಮಾತನಾಡಿ ಕೆ.ಹೆಚ್. ಮುನಿಯಪ್ಪ 7 ಬಾರಿ ಸಂಸದರಿಗೆ ಅಯ್ಕೆಯಾದವರು, 10 ವರ್ಷಗಳ ಕಾಲ ಕೇಂದ್ರ ಸಚಿವರಾಗಿ ಕೆಲಸ ಮಾಡಿರುವ ರಾಜಕೀಯ ಮುತ್ಸದಿ ಅವರು, ಅವರ ವಿರುದ್ಧ ವಿಧಾನ ಪರಿಷತ್ ಸದಸ್ಯ ನಸೀರ್ ಅಹ್ಮದ್ ಕೀಳು ಅಭಿರುಚಿಯನ್ನ ವ್ಯಕ್ತಪಡಿಸಿದ್ದಾರೆ, ಇದು ಮಾದಿಗ ಸಮುದಾಯಕ್ಕೆ ಮಾಡಿದ ಅವಮಾನ , ಅವರು ಎಂದು ದ್ವೇಷ ರಾಜಕಾರಣ ಮಾಡಿಲ್ಲ ಎಲ್ಲರ ಮನಸ್ಸು ಗೆದ್ದಿದ್ದಾರೆ.
ವಾಸ್ತು ಪ್ರಕಾರ ಮನೆಯಲ್ಲಿ ಬಿದಿರುಗಳನ್ನು ಈ ರೀತಿಯಾಗಿ ಇಟ್ಟುಕೊಂಡರೆ ಅದೃಷ್ಟವಂತೆ.!
ಕೋಲಾರದಲ್ಲಿ ಷಡ್ಯಂತ್ರ ನಡೆಸಿ ಕೋಲಾರ ಲೋಕಸಭಾ ಚುನಾವಣೆಯಲ್ಲಿ ಸೋಲಿಸಿದವರು ಇಂದು ಅವರ ವಿರುದ್ಧ ಅವಹೇಳಕಾರಿ ಹೇಳಿಕೆ ನೀಡಿದ್ದಾರೆ, ಅವರ ವಿರುದ್ಧದ ಷಡ್ಯಂತ್ರ ಸತ್ಯ ಶೋಧನ ಸಮಿತಿಯಿಂದ ಬಹಿರಂಗವಾಗಿದೆ, ದೆಹಲಿ ಹೈಕಮಾಂಡ್ ಚಿಕ್ಕಪೆದ್ದಣ್ಣನವರಿಗೆ ಟಿಕೆಟ್ ಫೈನಲ್ ಮಾಡಿತ್ತು, ಇದರಿಂದ ಬೇಸತ್ತು ಹೇಳಿಕೆ ಈ ನೀಡಿದ್ದಾರೆ, ತಕ್ಷಣವೇ ಅವರನ್ನು ವಜಾ ಮಾಡಬೇಕೆಂದು ಆಗ್ರಹ ಮಾಡಿದರು.