ಬೆಂಗಳೂರು : ಹಣ ಹೊಳೆಯನ್ನೇ ಹರಿಸುವ ಕಾಂಗ್ರೆಸ್ನವರನ್ನು ಸೋಲಿಸೋದು ಸುಲಭವಲ್ಲ ಎಂದು ಬಿಜೆಪಿ ಹಾಗೂ ಜೆಡಿಎಸ್ ನಾಯಕರಿಗೆ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಎಚ್ಚರಿಕೆ ನೀಡಿದರು.
ಬೆಂಗಳೂರಿನಲ್ಲಿ ನಡೆದ ಬಿಜೆಪಿ ಹಾಗೂ ಜೆಡಿಎಸ್ ನಾಯಕರ ಜಂಟಿ ಸಮನ್ವಯ ಸಭೆಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ನವರು ಸಂಪನ್ಮೂಲ ಸಂಗ್ರಹ ಮಾಡಿದ್ದೇ ಅಕ್ರಮ ಮಾರ್ಗದಲ್ಲಿ ಎಂದು ಗಂಭೀರ ಆರೋಪ ಮಾಡಿದರು.
ಕಾಂಗ್ರೆಸ್ ಬಳಿ ಸಂಪನ್ಮೂಲ ಹೆಚ್ಚಾಗಿದೆ. ಅವರು ಈ ಬಾರಿಯ ಚುನಾವಣೆಯಲ್ಲಿ ಎಷ್ಟು ಹಣ ಸುರಿಯುತ್ತಿದ್ದಾರೆ? ಅವರು ಬೇರೆ ರಾಜ್ಯಗಳಿಗೂ ಹಣ ಸಾಗಿಸಿದ್ರು. ಆದರೂ, ಸೋಕಾಲ್ಡ್ ಕಾಂಗ್ರೆಸ್ ನಾಲ್ಕು ರಾಜ್ಯಗಳಲ್ಲಿ ಚುನಾವಣೆ ಸೋಲ್ತು. ಅವರು ಈ ಚುನಾವಣೆಯಲ್ಲಿ ಹಣದ ಹೊಳೆಯೇ ಹರಿಸಬಹುದು. ಆದ್ರೆ, ಜನ ನಮ್ಮ ಪರ ಇದ್ದಾರೆ ಎಂದು ಹೇಳಿದರು.
ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ: ಸಹಾಯ ಮಾಡಿದ್ದ ಸಂಚುಕೋರನೊಬ್ಬನನ್ನು ಬಂಧಿಸಿದ NIA
ಪರಸ್ಪರ ಸಹಕಾರ, ಒಗ್ಗಟ್ಟು ಹಾಗೂ ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಪಾತ್ರ ಮುಖ್ಯವಾಗಿದೆ. ಹಿಂದೆ ಆಗಿದ್ದೆಲ್ಲ ಮರೆತುಬಿಡಿ, ಕಾಲ ಕ್ಷಣಿಕ. ನಮ್ಮ ವಿರೋಧಿಗಳು ಪ್ರಬಲರಾಗಿದ್ದಾರೆ. ಕಾಂಗ್ರೆಸ್ ಪಕ್ಷವನ್ನು ಸೋಲಿಸುವುದು ಅಷ್ಟು ಸುಲಭ ಅಲ್ಲ. ಹಿಂದೆ ಆಗಿರುವ ಲೋಪಗಳನ್ನು ಸರಿಪಡಿಸಿಕೊಂಡು ಮುಂದುವರೆಯೋಣ ಎಂದು ತಿಳಿಸಿದರು.
ಪ್ರಧಾನಿ ಮೋದಿಯವರ ಜತೆ ಕೈಜೋಡಿಸಲು ಹಲವು ಕಾರಣಗಳಿವೆ. 60 ವರ್ಷ ಸಾರ್ವಜನಿಕ ಜೀವನದಲ್ಲಿ ಹೋರಾಟ ಮಾಡಿದ್ದೇನೆ. ನನಗೆ ಎಲ್ಲದರ ಬಗ್ಗೆ ಅರಿವು ಇದೆ. ಮೋದಿ ಹೆಸರು ಮಾತ್ರವೇ ಈ ಚುನಾವಣೆಯಲ್ಲಿ ಟ್ರಂಪ್ ಕಾರ್ಡ್ ಆಗಿದೆ. ಚುನಾವಣೆಯಲ್ಲಿ ಮೋದಿಯವರ ಹೆಸರಿನ ಬಲ ಮುಖ್ಯವಾಗಲಿದೆ. ದೇಶದಲ್ಲಿ ಮೋದಿಯವರಂಥ ನಾಯಕ ಮತ್ತೊಬ್ಬರು ಇಲ್ಲ ಎಂದು ಹೆಚ್.ಡಿ. ದೇವೇಗೌಡ ಹೇಳಿದರು.