ಬೆಂಗಳೂರು: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ, ಜೆಡಿಎಸ್ ನಾಯಕರು ಒಗ್ಗಟ್ಟಿನ ಪ್ರದರ್ಶನ ಮಾಡಿದ್ದಾರೆ. ಭಾರತೀಯ ಜನತಾದಳ ಪಾರ್ಟಿ ಮತ್ತು ಜಾತ್ಯತೀತ ಜನತಾದಳ ಪಕ್ಷದ ವತಿಯಿಂದ ಲೋಕಸಭಾ ಚುನಾವಣೆ- 2024 ಕ್ಕೆ ಸಂಬಂಧಿಸಿದಂತೆ ಸಮನ್ವಯ ಸಭೆಯನ್ನು ರೇಡಿಸನ್ ಬ್ಲೂ ಹೋಟೆಲ್ನಲ್ಲಿ ಏರ್ಪಡಿಸಲಾಯಿತು.
ಸಮನ್ವಯ ಸಭೆಯಲ್ಲಿ ಲೋಕಸಭಾ ಚುನಾವಣೆಯನ್ನು ಒಟ್ಟಿಗೆ ಎದುರಿಸೋ ಬಗ್ಗೆ ಮಹತ್ವದ ಚರ್ಚೆ ನಡೆಸಲಾಗಿದೆ. ಪ್ರಮುಖವಾಗಿ ಬಿಜೆಪಿ, ಜೆಡಿಎಸ್ ಯುವ ನಾಯಕರು ಒಟ್ಟಿಗೆ ಕೈ ಕುಲುಕುತ್ತಾ ಕಾಲ ಕಳೆದಿದ್ದು ವಿಶೇಷವಾಗಿತ್ತು.
ಬಿಜೆಪಿ, ಜೆಡಿಎಸ್ ಸಮನ್ವಯ ಸಭೆಯಲ್ಲಿ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರು, ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ, ಹೆಚ್.ಡಿ ಕುಮಾರಸ್ವಾಮಿ, ವಿಪಕ್ಷ ನಾಯಕ ಆರ್.ಅಶೋಕ್, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಪರಿಷತ್ ಸದಸ್ಯ ಟಿ.ಎ.ಶರವಣ ಸೇರಿದಂತೆ ಹಲವು ನಾಯಕರು ಭಾಗಿಯಾಗಿದ್ದಾರೆ
ಬಿ.ವೈ ವಿಜಯೇಂದ್ರ ಅವರಿಗೂ ಜೆಡಿಎಸ್ ಪಕ್ಷದ ಶಾಲು ನೀಡುವ ಮೂಲಕ ಎರಡೂ ಪಕ್ಷದ ನಾಯಕರು ತಮ್ಮಲ್ಲಿ ಎಷ್ಟು ಸಮನ್ವಯತೆ ಇದೆ ಅನ್ನೋದನ್ನ ಸಾರಿದರು.