ಬೆಂಗಳೂರು/ರಾಷ್ಟ್ರೀಯ:- 2024 ರ ಲೋಕಸಭಾ ಚುನಾವಣೆಗೆ ಕೆಲವೇ ದಿನಗಳು ಬಾಕಿ ಇದ್ದು, ಈ ಹೊತ್ತಲ್ಲೇ ಬಿಪಿಎಲ್ ಕಾರ್ಡ್ ದಾರರಿಗೆ ಕೇಂದ್ರ ಗುಡ್ ನ್ಯೂಸ್ ನೀಡಿದೆ.
ಪದೇ-ಪದೇ ಕಾಲು ನೋವಿನಿಂದ ಬಳಲುತ್ತಿದ್ದೀರಾ!?, ನಿರ್ಲಕ್ಷ್ಯ ಬೇಡ, ಇಂದೇ ವೈದ್ಯರನ್ನು ಸಂಪರ್ಕಿಸಿ!
ಹೌದು, ಪ್ರಧಾನ ಮಂತ್ರಿ ಉಜ್ವಲ ಯೋಜನೆಯನ್ನು 2016ರಲ್ಲಿ ಕೇಂದ್ರ ಸರ್ಕಾರ ಜಾರಿಗೊಳಿಸಿತು. ಇದು ದೇಶದ ಬಡ ಮಹಿಳೆಯರಿಗೆ ಉಚಿತ ಗ್ಯಾಸ್ ಸಿಲಿಂಡರ್ಗಳನ್ನು ಒದಗಿಸುವ ಯೋಜನೆಯಾಗಿದೆ.
ಈ ಯೋಜನೆಯ ಅಡಿಯಲ್ಲಿ ವಾರ್ಷಿಕವಾಗಿ 3 ಸಿಲಿಂಡರ್ ಉಚಿತವಾಗಿ ಸಿಗುತ್ತದೆ. www.pmuy.gov.in ಸೈಟ್ಗೆ ಹೋಗಿ ಅರ್ಜಿ ಸಲ್ಲಿಸಬೇಕು.
ಇದಕ್ಕೆ ಬಿಪಿಎಲ್ ಪಡಿತರ ಚೀಟಿ ಹೊಂದುವುದು ಕಡ್ಡಾಯವಾಗಿದೆ. ಇದರೊಂದಿಗೆ ಆಧಾರ್ ಕಾರ್ಡ್, ಬ್ಯಾಂಕ್ ಖಾತೆ ಎಲ್ಲವನ್ನೂ ಲಿಂಕ್ ಮಾಡಿರಬೇಕು. ಹೀಗಾಗಿದ್ದರೆ ನೀವು ಉಚಿತ ಸಿಲಿಂಡರ್ ಪಡೆಯಬಹುದಾಗಿದೆ.