ಬೆಂಗಳೂರು:- ಸಾಮಾಜಿಕ ಹೋರಾಟಗಾರ ಪ್ರಶಾಂತ್ ಸಂಬರ್ಗಿಗೆ ಜೀವ ಬೆದರಿಕೆ ಬಂದಿದ್ದು, ಈಗ ಈ ಸಂಬಂಧ ಠಾಣೆ ಮೆಟ್ಟಿಲೇರಿದ್ದಾರೆ.
ಅಂತರಾಷ್ಟ್ರೀಯ ನಂಬರ್ ನಿಂದ ಬೆದರಿಕೆ ಕರೆ ಹಾಗು ವಾಟ್ಸಪ್ ಸಂದೇಶ ಬಂದಿದೆ ಎನ್ನಲಾಗಿದೆ. ರಾಮೇಶ್ವರಂ ಕೆಫೆಗೆ ತೆರಳಿದ ವಿಚಾರ ಪ್ರಸ್ತಾಪಿಸಿ ದುಷ್ಕರ್ಮಿಗಳು ನಟನಿಗೆ ಬೆದರಿಕೆ ಹಾಕಿದ್ದಾರೆ ಎನ್ನಲಾಗಿದೆ.
IPL 2024: ಕೊಹ್ಲಿ ಭರ್ಜರಿ ಬ್ಯಾಟಿಂಗ್ – ಕೆಕೆಆರ್ ಗೆ 183 ರನ್ ಟಾರ್ಗೆಟ್ ನೀಡಿದ RCB !
ಆ್ಯಸಿಡ್ ಹಾಕಿ ಕೊಲ್ಲುವುದಾಗಿ ಬೆದರಿಕೆ ಹಾಕಿರುವ ದುಷ್ಕರ್ಮಿಗಳು ಮಕ್ಕಳ ಪೋಟೊ ಮೇಲೆ ಮಾರ್ಕ್ ಮಾಡಿ ಶೂಟ್ ಮಾಡುವ ಬೆದರಿಕೆ ಹಾಕಿದ್ದಾರೆ. ಈ ಹಿನ್ನಲೆ ಚನ್ನಮ್ಮನ ಕೆರೆ ಪೊಲೀಸ್ ಠಾಣೆಗೆ ಪ್ರಶಾಂತ್ ಸಂಬರ್ಗಿ ದೂರು ನೀಡಿದ್ದಾರೆ. ಸಂಬರ್ಗಿ ದೂರಿನ ಹಿನ್ನಲೆ ಪ್ರಕರಣ ದಾಖಲಿಸಿಕೊಂಡು ಪೊಲೀಸರು ತನಿಖೆ ಆರಂಭಿಸಿದ್ದಾರೆ.