ಮಂಡ್ಯ:– ಚುನಾವಣೆ ಬಂದ್ರೆ ಸಾಕು ಕುಮಾರಸ್ವಾಮಿಗೆ ಹಾರ್ಟ್ ಸಮಸ್ಯೆ ಬರುತ್ತೆ ಎಂದು ಹೇಳುವ ಮೂಲಕ ಶಾಸಕ ಬಂಡಿಸಿದ್ದೇಗೌಡ ವ್ಯಂಗ್ಯವಾಗಿದ್ದಾರೆ.
ಮೂರೇ ದಿನದಲ್ಲಿ ಹೃದಯ ಶಸ್ತ್ರಚಿಕಿತ್ಸೆ ಆಗುತ್ತದೆ. ನಾಲ್ಕನೇ ದಿನಕ್ಕೆ ರಾಜ್ಯ ಸುತ್ತುತ್ತಾರೆ, ಅದು ಹೇಗೆ ಸಾಧ್ಯ ಎಂದು ವ್ಯಂಗ್ಯವಾಡಿದರು.
Breaking News: ಪತ್ನಿಯ ಅನೈತಿಕ ಸಂಬಂಧಕ್ಕೆ ಬೇಸತ್ತು ನೇಣಿಗೆ ಶರಣಾದ ಪತಿ!
ಸಚಿವ ಚಲುವರಾಯಸ್ವಾಮಿ ಅವರಿಗೆ ಇರುವ ಕಾಯಿಲೆ ಹೆಚ್ಡಿ ಕುಮಾರಸ್ವಾಮಿಯವರಿಗೂ ಇದೆ. ಆದರೆ, ಚಲುವರಾಯಸ್ವಾಮಿ ಆಸ್ಪತ್ರೆಗೆ ದಾಖಲಾದರೆ ಒಂದು ತಿಂಗಳು ಆಚೆ ಬರಲ್ಲ. ಹೆಚ್ಡಿ ಕುಮಾರಸ್ವಾಮಿ ಹೇಗೆ ಶಸ್ತ್ರಚಿಕಿತ್ಸೆಯಾದ ಎರಡೇ ದಿನಕ್ಕೆ ಆಚೆ ಹೇಗೆ ಬರುತ್ತಾರೆ?. ಇದು ಅಭಿವೃದ್ಧಿ ವರ್ಸಸ್ ಕಣ್ಣೀರಿಡುವ ಜನರ ಚುನಾವಣೆ. ನನಗೆ ಆ ತೊಂದರೆ ಇದೆ, ಈ ತೊಂದರೆ ಇದೆ ಎಂದರೇ ಕೇಳಬೇಡಿ. ಅಧಿಕಾರದಲ್ಲಿ ಇದ್ದಾಗ ಏನ್ ಮಾಡಿದ್ದೀರಿ ಎಂದು ಪ್ರಶ್ನೆ ಮಾಡಿ. ಕಾಂಗ್ರೆಸ್ ಅಭ್ಯರ್ಥಿಗೆ ಅತಿಹೆಚ್ಚು ಮತ ನೀಡಿ ಗೆಲ್ಲಿಸಿ ಎಂದರು.