ದೆಹಲಿ: ದೆಹಲಿ ಮದ್ಯ ನೀತಿ ಹಗರಣ ಪ್ರಕರಣದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ (Arvind Kejriwal) ಬಂಧನಕ್ಕೊಳಗಾಗಿದ್ದಾರೆ. ಅವರ ಬೆನ್ನಲ್ಲೇ ದೆಹಲಿ ಸಚಿವ ಕೈಲಾಶ್ ಗೆಹ್ಲೋಟ್ಗೆ (Kailash Gahlot) ಇ.ಡಿ ಸಮನ್ಸ್ ನೀಡಿದೆ.
ಎಎಪಿ ನಾಯಕ ಗೆಹ್ಲೋಟ್ ಅವರು ದೆಹಲಿ ಸರ್ಕಾರದಲ್ಲಿ ಗೃಹ, ಸಾರಿಗೆ ಮತ್ತು ಕಾನೂನು ಸಚಿವರಾಗಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ಜಾರಿ ನಿರ್ದೇಶನಾಲಯ ಕರೆದಿದೆ.
https://ainlivenews.com/union-minister-amit-shah-will-visit-the-state-on-april-2/
ಇ.ಡಿ ಸಮನ್ಸ್ ಬರುತ್ತಿದ್ದಂತೆ ಗೆಹ್ಲೋಟ್ ಅವರು ಈಗಾಗಲೇ ತನಿಖಾ ಸಂಸ್ಥೆಯ ಕಚೇರಿಯನ್ನು ತಲುಪಿದ್ದಾರೆ. ಪ್ರಕರಣದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಬಂಧಿಸಿದ ಕೆಲವೇ ದಿನಗಳಲ್ಲಿ ಸಮನ್ಸ್ ಬಂದಿದೆ.
ಈ ಪ್ರಕರಣದಲ್ಲಿ ವಿಚಾರಣೆಗೆ ಹಾಜರಾಗುವಂತೆ ಕೈಲಾಶ್ ಗಹ್ಲೋಟ್ ಅವರನ್ನು ಕೇಳಲಾಗಿತ್ತು. ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್ಎ) ಅಡಿಯಲ್ಲಿ ಅವರ ಹೇಳಿಕೆಯನ್ನು ದಾಖಲಿಸಿಕೊಳ್ಳಲಾಗುವುದು ಎಂದು ಇಡಿ ಮೂಲಗಳು ತಿಳಿಸಿವೆ.