ಬೆಂಗಳೂರು/ ಮೈಸೂರು: ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ (Mysuru-Kodagu Lok Sabha) ಬಿಜೆಪಿ ಅಭ್ಯರ್ಥಿ, ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ (Yaduveer Krishnadatta Chamaraja Wadiyar) ಏ.3 ರಂದು ನಾಮಪತ್ರ ಸಲ್ಲಿಸಲಿದ್ದಾರೆ.
Lok Sabha Election 2024: ಕರ್ನಾಟಕದಲ್ಲಿ ಚುನಾವಣೆ ನಡೆಯುವ ದಿನ ಸಾರ್ವತ್ರಿಕ ರಜೆ ಘೋಷಣೆ!
ಈ ಕುರಿತು ಎಕ್ಸ್ನಲ್ಲಿ ಪೋಸ್ಟ್ ಹಾಕಿರುವ ಯದುವೀರ್, ಏ.3 ರಂದು ಬೆಳಗ್ಗೆ 10:30 ಕ್ಕೆ ಮೆರವಣಿಗೆ ಮೂಲಕ ಸಾಗಿ ನಾಮಪತ್ರ ಸಲ್ಲಿಸಲಾಗುವುದು. ದೊಡ್ಡ ಸಂಖ್ಯೆಯಲ್ಲಿ ಬಂದು ಸೇರುವಂತೆ ಕಾರ್ಯಕರ್ತರು ಹಾಗೂ ಅಭಿಮಾನಿಗಳಲ್ಲಿ ಮನವಿ ಮಾಡಿದ್ದಾರೆ.
https://x.com/yaduveerwadiyar/status/1773931988887683425?s=20
ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಮೆರವಣಿಗೆ ಆರಂಭವಾಗಲಿದ್ದು, ನಾಮಪತ್ರ ಸಲ್ಲಿಕೆ ಸ್ಥಳಕ್ಕೆ ತೆರಳಲಿದೆ. ಮೈಸೂರು-ಕೊಡಗಿನ ಸಮಸ್ತ ಜನತೆ ಈ ಕಾರ್ಯಕ್ರಮಕ್ಕೆ ಆಗಮಿಸಿ ನಿಮ್ಮ ಉಪಸ್ಥಿತಿಯಿಂದ ನಮ್ಮನ್ನು ಆಶೀರ್ವದಿಸಬೇಕೆಂದು ನಾನು ಮನವಿ ಮಾಡುತ್ತೇನೆ ಎಂದು ಹೇಳಿದ್ದಾರೆ.