ಬೆಂಗಳೂರು:-ಟಿಕೆಟ್ ಸಿಗದೆ ಅಸಮಾಧಾನಗೊಂಡಿದ್ದ ಕರಡಿ ಸಂಗಣ್ಣ ಮುನಿಸು ಶಮನಗೊಂಡಿದ್ದು, ಕೊಪ್ಪಳ ಬಿಜೆಪಿ ಅಭ್ಯರ್ಥಿ ಪರ ಪ್ರಚಾರಕ್ಕಿಳಿಯಲು ಒಪ್ಪಿಗೆ ನೀಡಿದ್ದಾರೆ.
Kalaburgi: ಲೋಕ ಸಮರದಲ್ಲಿ ಮಾತಿನ ಫೈಟು -ಪ್ರಿಯಾಂಕ್ ಖರ್ಗೆ-ಉಮೇಶ್ ಜಾಧವ್ ಏಟು-ಏದಿರೇಟು!
ವಿಧಾನಸಭೆ ವಿಪಕ್ಷ ಮುಖ್ಯ ಸಚೇತಕ ದೊಡ್ಡನಗೌಡ ಪಾಟೀಲ್ ಅವರು ಇಂದು ಕರಡಿ ಸಂಗಣ್ಣ ಮತ್ತು ಬಿಜೆಪಿ ಅಭ್ಯರ್ಥಿ ಡಾ. ಬಸವರಾಜ ಕ್ಯಾವಟೂರ್ ಅವರನ್ನು ಯಡಿಯೂರಪ್ಪ ನಿವಾಸಕ್ಕೆ ಕರೆದೊಯ್ದಿದ್ದರು. ಈ ವೇಳೆ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರು ಮಾತುಕತೆ ನಡೆಸಿ ಕರಡಿ ಸಂಗಣ್ಣ ಅವರನ್ನು ಸಮಾಧಾನಗೊಳಿಸುವಲ್ಲಿ ಯಶಸ್ವಿಯಾದರು.
ಸಂಧಾನ ಮಾತುಕತೆ ವೇಳೆ ರಾಜ್ಯಸಭಾ ಸದಸ್ಯ ಲೇಹರ್ ಸಿಂಗ್ ಮತ್ತು ಮಾಜಿ ಶಾಸಕ ಬಸವರಾಜ ದಡೇಸೂಗೂರು ಕೂಡಾ ಉಪಸ್ಥಿತರಿದ್ದರು. ಮಾತುಕತೆ ವೇಳೆ ಬಿಜೆಪಿ ಅಭ್ಯರ್ಥಿ ಬಸವರಾಜ ಕ್ಯಾವಟೂರ್ ಪರ ಪ್ರಚಾರ ನಡೆಸುವಂತೆ ಮನವಿ ಮಾಡಲಾಯಿತು. ಅದರಂತೆ, ಸೋಮವಾರ ಕುಷ್ಠಗಿಯಲ್ಲಿ ನಡೆಯುವ ಪಕ್ಷದ ಪ್ರಚಾರ ಸಭೆಯಲ್ಲಿ ಭಾಗವಹಿಸಲು ಸಂಗಣ್ಣ ಕರಡಿ ಅವರು ಒಪ್ಪಿಗೆ ಸೂಚಿಸಿದ್ದಾರೆ.