ಚಿತ್ರದುರ್ಗ, ಮಾರ್ಚ್.31– ಭಾರತೀಯ ಜನತಾ ಪಕ್ಷ ದೇಶವನ್ನು ಒಗ್ಗೂಡಿಸುವ ಕೆಲಸ ಮಾಡುತ್ತಿದೆ ಎಂದು ಮಾಜಿ ಉಪ ಮುಖ್ಯಮಂತ್ರಿ ಹಾಗೂ ಚಿತ್ರದುರ್ಗ ಲೋಕಸಭಾ ಅಭ್ಯರ್ಥಿ ಗೋವಿಂದ ಕಾರಜೋಳ ಹೇಳಿದರು. ಜಿಲ್ಲೆಯ ಸುಕ್ಷೇತ್ರ ನಾಯಕನಹಟ್ಟಿ ಶ್ರೀ ಗುರು ತಿಪ್ಪೇರುದ್ರಸ್ವಾಮಿ ದೇವಾಲಯಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿ ನಂತರ ಮಾತನಾಡಿದ ಅವರು, ದೇಶದ 140 ಕೋಟಿ ಜನ ಮತ್ತೊಮ್ಮೆ ನರೇಂದ್ರ ಮೋದಿಜಿ ಅವರು ಈ ದೇಶದ ಪ್ರಧಾನಮಂತ್ರಿಯಾಗಬೇಕೆಂಬ ಮಹತ್ವಕಾಂಕ್ಷಿ ಹೊಂದಿದ್ದಾರೆ.
ಕಾಂಗ್ರೆಸ್ ಪಕ್ಷ 60 ವರ್ಷಗಳ ಕಾಲ ಈ ದೇಶವನ್ನು ಆಳಿದೆ ದೇಶದ ಜನರ ಭಾವನಾತ್ಮಕ ವಿಷಯಗಳು ಜಾತಿ ಧರ್ಮಗಳ ಮಧ್ಯೆ ವಿಷ ಬೀಜ ಬಿತ್ತಿ ನಿರಂತರವಾಗಿ ಎಲ್ಲಾ ಚುನಾವಣೆಗಳಲ್ಲಿ ವೋಟ್ ಬ್ಯಾಂಕ್ ರಾಜಕಾರಣವನ್ನು ಮಾಡುತ್ತಿದೆ. ಈ ದೇಶವನ್ನು ಹಾವಾಡಿಗರ ದೇಶ ಎಂಬ ಹಣೆ ಪಟ್ಟಿಯಿಂದ ಅಳಿಸಿ ಮೋದಿಜಿ ಅವರು ಕಳೆದ ಹತ್ತು ವರ್ಷಗಳಿಂದ ಇಡೀ ಭಾರತ ದೇಶವನ್ನೇ ಅಭಿವೃದ್ಧಿ ಪಥದತ್ತ ಕೊಂಡೊಯ್ದಿದ್ದಾರೆ. ವಿಶ್ವದ ನಾನಾ ರಾಷ್ಟ್ರಗಳು ಇಂದು ಭಾರತಕ್ಕೆ ಸ್ವಾಗತ ಕೋರುತ್ತಿವೆ. ಇದು ಬಿಜೆಪಿಯ ಹೆಗ್ಗಳಿಕೆ ಕಾಂಗ್ರೆಸ್ ಪಕ್ಷದವರು ಈ ಸತ್ಯವನ್ನು ಅರಿತುಕೊಳ್ಳಬೇಕು.
ನಾನು ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಟಿಕೆಟ್ ಆಕಾಂಕ್ಷಿ ಆಗಿರಲಿಲ್ಲ ಬದಲಿಗೆ ಎ. ನಾರಾಯಣಸ್ವಾಮಿ ರವರಿಗೆ ಟಿಕೆಟ್ ನೀಡುವಂತೆ ಶಿಫಾರಸ್ ಮಾಡಿದ್ದೆ ಆದರೆ ಅವರು ರಾಜ್ಯ ರಾಜಕಾರಣದಲ್ಲಿ ಜನಸೇವೆ ಮಾಡಲು ಒಲವು ತೋರಿಸಿದ್ದರಿಂದ ಪಕ್ಷ ನನಗೆ ಟಿಕೆಟ್ ನೀಡಿದೆ ಎಂದರು. ಸಂದರ್ಭದಲ್ಲಿ, ಚಿತ್ರ ದುರ್ಗ ಬಿಜೆಪಿ ಘಟಕದ ಅಧ್ಯಕ್ಷ ಎ. ಮುರಳಿ, ಪದಾಧಿಕಾರಿಗಳಾದ ಜೆ ಪಿ ಜಯಪಾಲಯ್ಯ, ರಾಮದಾಸ್, ಜಿ ಟಿ ಸುರೇಶ್, ಸಂಪತ್ ಕುಮಾರ್, ಜಿಲ್ಲಾ ಎಸ್ ಟಿ ಘಟಕ ಅಧ್ಯಕ್ಷ ಪಿ ಶಿವಣ್ಣ, ಎಸ್ ಟಿ ಬೋರ್ ಸ್ವಾಮಿ, ಗಿಡ್ಡಪುರ ಬಿ ಶಾರದಮ್ಮ,
ಚಳ್ಳಕೆರೆ ಮಂಡಲ ಅಧ್ಯಕ್ಷ ಸೂರನಹಳ್ಳಿ ಶ್ರೀನಿವಾಸ್,ನಾಯಕನಹಟ್ಟಿ ಮಂಡಲ ಅಧ್ಯಕ್ಷ ಈ ರಾಮರೆಡ್ಡಿ, ಮುಖಂಡರಾದ. ಟಿ ರೇವಣ್ಣ, ಬಿ ತಿಪ್ಪೇಸ್ವಾಮಿ, ಮಂಡಲ, ಪ್ರಧಾನ ಕಾರ್ಯದರ್ಶಿ ಎಚ್ ಪಿ ಪ್ರಕಾಶ್, ಬೆಂಕಿ ಗೋವಿಂದಪ್ಪ, ಚನ್ನಗಾನಹಳ್ಳಿ ಮಲ್ಲೇಶ್, ಪ್ರಧಾನ ಕಾರ್ಯದರ್ಶಿ ನಗರ ಘಟಕ ಅಧ್ಯಕ್ಷ ಎನ್ ಮಹಾಂತಣ್ಣ, ಡಿ ಓ ಮುರಾರ್ಜಿ, ಮಲ್ಲೂರಹಳ್ಳಿ ಮಲ್ಲಯ್ಯ, ಓಬಣ್ಣ, ಗುಂತಕೋಲಮ್ಮನಹಳ್ಳಿ ಎನ್ ತಿಪ್ಪೇಸ್ವಾಮಿ ಜೆಸಿಬಿ, ಅಬ್ಬೇನಹಳ್ಳಿ ಎಂ ಎಸ್ ಶಿವಪ್ರಕಾಶ್, ಮಲೇಬೋರಯ್ಯನಹಟ್ಟಿ ಬಿ. ಶಂಕರಸ್ವಾಮಿ, ತೊರೆಕೊಲಮ್ಮನಹಳ್ಳಿ, ಮಂಜಣ್ಣ, ತಾರಕೇಶ್ , ಗುಂತಕೂಲಮ್ಮನಹಳ್ಳಿ ಎಸ್ ಶಿವತಿಪ್ಪೇಸ್ವಾಮಿ, ಬೂಟ್ ತಿಪ್ಪೇಸ್ವಾಮಿ, ಇದ್ದರು.
ವರದಿ : ಹನುಮಂತರಾಜು ಚಳ್ಳಕೆರೆ