ಬೆಂಗಳೂರು: ಚಿಕ್ಕಬಳ್ಳಾಪುರ (Chikkaballapura) ಲೋಕಸಭಾ ಕ್ಷೇತ್ರದ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ಅಭ್ಯರ್ಥಿ ಕೆ ಸುಧಾಕರ್ (K Sudhakar) ಹಾಗೂ ಯಲಹಂಕ ಶಾಸಕ ಎಸ್ಆರ್ ವಿಶ್ವನಾಥ್ (SR Vishwanath) ನಡುವೆ ಮುನಿಸು ಮುಂದುವರಿದಿದೆ. ವಿಶ್ವನಾಥ್ ಅವರನ್ನು ಭೇಟಿ ಮಾಡಲೆಂದು ಅವರ ನಿವಾಸಕ್ಕೆ ಆಗಮಿಸಿದ ಸುಧಾಕರ್ ಅನ್ನು ಭೇಟಿ ಮಾಡದೇ ಯಲಹಂಕ ಶಾಸಕ ರೆಬೆಲ್ ನಡೆ ತೋರಿದ್ದಾರೆ.
ಚಿಕ್ಕಬಳ್ಳಾಪುರದಲ್ಲಿ ಡಾ.ಕೆ.ಸುಧಾಕರ್ಗೆ ಬಿಜೆಪಿ ಟಿಕೆಟ್ ನೀಡಿದ್ದರಿಂದ ಶಾಸಕ ಎಸ್ಆರ್ ವಿಶ್ವನಾಥ್ ರೆಬೆಲ್ ಆಗಿದ್ದಾರೆ. ಟಿಕೆಟ್ ಘೋಷಣೆಯಾಗಿ ವಾರವಾದರೂ ವಿಶ್ವನಾಥ್ ಮುನಿಸು ಮುಗಿದಿಲ್ಲ. ವಿಶ್ವನಾಥ್ ಪುತ್ರ ಅಲೋಕ್ಗೆ ಚಿಕ್ಕಬಳ್ಳಾಪುರ ಟಿಕೆಟ್ ಕೇಳಿದ್ದರು. ಟಿಕೆಟ್ ಕೈತಪ್ಪಿದ ಹಿನ್ನೆಲೆ ವಿಶ್ವನಾಥ್ ಅಸಮಧಾನಗೊಂಡಿದ್ದಾರೆ. ಅಲ್ಲದೇ ಸುಧಾಕರ್ಗೆ ಬೆಂಬಲ ಕೊಡದಿರಲು ಎಸ್ಆರ್ ವಿಶ್ವನಾಥ್ ನಿರ್ಧರಿಸಿದ್ದಾರೆ.
ಈ ಮಧ್ಯೆ ಖುದ್ದು ಸುಧಾಕರ್ ತಮ್ಮ ನಿವಾಸಕ್ಕೆ ಬಂದರೂ ಸಹ ವಿಶ್ವನಾಥ್ ಅವರನ್ನು ಭೇಟಿ ಮಾಡಿಲ್ಲ. ಪಕ್ಷದ ಅಭ್ಯರ್ಥಿ ಮನೆಗೆ ಬಂದರೂ ಎದುರುಗೊಳ್ಳದೇ ಯಲಹಂಕ ಶಾಸಕ ರೆಬೆಲ್ ನಡೆ ತೋರಿದ್ದಾರೆ. ಸುಧಾಕರ್ ಜೊತೆ ಒಡನಾಟವೇ ಬೇಡ ಎಂಬ ತೀರ್ಮಾನಕ್ಕೆ ವಿಶ್ವನಾಥ್ ಬಂದಿದ್ದಾರೆ. ಚಿಕ್ಕಬಳ್ಳಾಪುರ ಭಿನ್ನಮತ ತೀವ್ರ ಹಿನ್ನೆಲೆಯಲ್ಲಿ ಬಿಜೆಪಿ ನಾಯಕರಲ್ಲಿ ಆತಂಕ ಹೆಚ್ಚಾಗಿದೆ. ಎಸ್ಆರ್ ವಿಶ್ವನಾಥ್ ಭೇಟಿ ಮಾಡಲು ಒಪ್ಪದ ಹಿನ್ನೆಲೆ ಸುಧಾಕರ್ಗೆ ಮುಜುಗರವುಂಟಾಗಿ ವಾಪಸ್ ತೆರಳಿದ್ದಾರೆ.