ಬೆಂಗಳೂರು: ಸಿ.ಪಿ ಯೋಗೇಶ್ವರ್ ಪುತ್ರಿ ನಿಶಾ ನನ್ನ ಹಾಗೂ ನನ್ನ ತಮ್ಮನನ್ನು ಭೇಟಿ ಮಾಡಿದ್ದರು. ಅಪ್ಪ ಮಗಳನ್ನು ದೂರ ಮಾಡಿದ ಅಪಕೀರ್ತಿ ನನಗೆ ಬೇಡ ಎಂದು ಸುಮ್ಮನಿದ್ದೇನೆ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಪ್ಪ ಮಗಳ ವಿಚಾರ ಸರಿ ಹೋಗಬಹುದು.
ಅವಳು ಇನ್ನೂ ಮದುವೆಯಾಗಬೇಕು, ತಂದೆ ಹಾಲು ಎರೆಯಬೇಕು, ಅಕ್ಷತೆ ಕಾಳು ಹಾಕಬೇಕು. ನನಗೆ ಅವಳ ಬಗ್ಗೆ ಹಾಗೂ ಆರ್ಥಿಕ ಪರಿಸ್ಥಿತಿ ಬಗ್ಗೆ ಎಲ್ಲಾ ಗೊತ್ತು ಅವರ ಅಮ್ಮನೂ ನನಗೆ ಪರಿಚಯವಿದ್ದಾರೆ. ಯೋಗೇಶ್ವರ್ ಅವರ ಈಗಿನ ಸಂಸಾರದ ಬಗ್ಗೆ ಗೊತ್ತಿಲ್ಲ ಎಂದಿದ್ದಾರೆ.
ಆ ಹೆಣ್ಣು ಮಗಳು ಬಹಳ ಗಟ್ಟಿಯಾಗಿ ನಿಂತಿದ್ದಾರೆ. ಕಾಂಗ್ರೆಸ್ ಸೇರುತ್ತೇನೆ ಎಂದರೆ ನಮ್ಮ ಪಕ್ಷದ ಸ್ಥಳಿಯ ನಾಯಕರ ಜೊತೆ ಮಾತನಾಡುತ್ತೇನೆ. ನಿಶಾ ಯೋಗೇಶ್ವರ್ ಧೈರ್ಯವಂತ ಹೆಣ್ಣು ಮಗಳು, ಏನೋ ಧೈರ್ಯ ಮಾಡಿದ್ದಾಳೆ. ನಾಳೆ ಜನ ಅಪ್ಪ ಮಗಳನ್ನು ಯಾಕೆ ದೂರ ಮಾಡಿದೆ ಎಂದು ನನ್ನನ್ನು ಪ್ರಶ್ನೆ ಮಾಡ್ತಾರೆ. ಅದಕ್ಕಾಗಿ ನಾನು ಸುಮ್ಮನಿದ್ದೇನೆ. ಮದುವೆಯಾಗಿ ಅವರದೇ ಕುಟುಂಬ ಇದ್ದಿದ್ದರೆ ವಿಚಾರ ಬೇರೆಯಾಗುತ್ತಿತ್ತು ಎಂದಿದ್ದಾರೆ.