ಕೋಲ್ಕತಾ :- ಯಾವುದೇ ಕಾರಣಕ್ಕೂ ಸಿಎಎ ಒಪ್ಪಬೇಡಿ, ಕೇಂದ್ರದ ಮಾತು ನಂಬಬೇಡಿ ಎಂದು ಮಮತಾ ಬ್ಯಾನರ್ಜಿ ಕರೆ ಕೊಟ್ಟಿದ್ದಾರೆ.
ಸಿಎಎ ಅನ್ನು ಒಪ್ಪಬಾರದು ಎಂದು ಮತುವಾ ಸಮುದಾಯದ ಜನರಿಗೆ ಕರೆ ನೀಡಿದ್ದಾರೆ. ಮತುವಾ ಎಂಬುದು ಹಿಂದೂ ಧರ್ಮದ ದಲಿತರು ಸೇರಿ ಆಗಿರುವ ಒಂದು ಮತವಾಗಿದ್ದು, ಬಾಂಗ್ಲಾದೇಶ ಮತ್ತು ಪಶ್ಚಿಮ ಬಂಗಾಳದಲ್ಲಿ ಈ ಸಮುದಾಯದವರು ಇದ್ದಾರೆ. ಭಾರತದ ವಿಭಜನೆ ಬಳಿಕ ಹಲವರು ಬಾಂಗ್ಲಾದೇಶದಿಂದ ಭಾರತಕ್ಕೆ ವಲಸೆ ಬಂದಿದ್ದಾರೆ. ಹಾಗೆಯೇ, ಧಾರ್ಮಿಕ ದೌರ್ಜನ್ಯಕ್ಕೊಳಗಾಗಿಯೂ ಬಾಂಗ್ಲಾದಿಂದ ಪಶ್ಚಿಮ ಬಂಗಾಳಕ್ಕೆ ವಲಸೆ ಬಂದವರಿದ್ದಾರೆ. ಇವರನ್ನು ಉದ್ದೇಶಿಸಿ ಮಾತನಾಡಿರುವ ಮಮತಾ ಬ್ಯಾನರ್ಜಿ, ಸಿಎಎ ಹಿಂದಿರುವ ಪಿತೂರಿ ಬಗ್ಗೆ ಎಚ್ಚರಿಸಲು ಪ್ರಯತ್ನಿಸಿದ್ದಾರೆ.
DC vs CSK IPL 2024: ಟಾಸ್ ಗೆದ್ದ ಡೆಲ್ಲಿ ಬ್ಯಾಟಿಂಗ್ ಆಯ್ಕೆ, CSK ಬೌಲಿಂಗ್!
ಮತುವನ್ನರೇ ನನ್ನ ಮೇಲೆ ನಂಬಿಕೆ ಇಡಿ. ನಿಮ್ಮ ಪೌರತ್ವವನ್ನು ಕಿತ್ತುಕೊಳ್ಳಲು ಯಾರಿಗೂ ಅವಕಾಶ ಕೊಡುವುದಿಲ್ಲ. ಕೇಂದ್ರ ಸರ್ಕಾರದ ಸುಳ್ಳು ಭರವಸೆಗಳಿಗೆ ಮಾರುಹೋಗಬೇಡಿ. ನೀವು ಪೌರತ್ವಕ್ಕೆ ಅರ್ಜಿ ಸಲ್ಲಿಸಿದರೆ ನಿಮ್ಮನ್ನು ಐದು ವರ್ಷ ವಿದೇಶಿಗ ಎಂದು ಪರಿಗಣಿಸುತ್ತಾರೆ. ನಿಮ್ಮಿಂದ ಎಲ್ಲವನ್ನೂ ಕಿತ್ತುಕೊಂಡು ಡಿಟೆಂಶನ್ ಕ್ಯಾಂಪ್ನಲ್ಲಿ ಇರಿಸುತ್ತಾರೆ. ನಿಮಗೆ ಅದು ಬೇಕಾ? ಅಥವಾ ಶಾಂತಿಯಿಂದ ಬದುಕುವುದು ಬೇಕಾ?’ ಎಂದು ಮಮತಾ ಬ್ಯಾನರ್ಜಿ ತಮ್ಮ ಭಾಷಣದ ವೇಳೆ ಕೇಳಿದ್ದಾರೆ.
ಪಶ್ಚಿಮ ಬಂಗಾಳದಲ್ಲಿ ಸಿಎಎ ಮಾತ್ರವಲ್ಲ, ಎನ್ಆರ್ಸಿಯನ್ನೂ ಜಾರಿ ಮಾಡಲು ಬಿಡುವುದಿಲ್ಲ’ ಎಂದು ತಮ್ಮ ಶಪಥವನ್ನು ದೀದಿ ಪುನರುಚ್ಚರಿಸಿದ್ದಾರೆ