ರಾಯಚೂರು:- ನಗರದ ಗದ್ವಾಲ್ ರಸ್ತೆಯಲ್ಲಿ ಬಿಜೆಪಿ ಶಾಸಕ ಬಿಜೆಪಿ ಶಾಸಕ ಡಾ.ಶಿವರಾಜ್ ಪಾಟೀಲ್ ಮೇಲೆ ಕತ್ತಿಯಿಂದ ಹಲ್ಲೆ ಮಾಡಲು ಯತ್ನಿಸಿದ ಘಟನೆ ಜರುಗಿದೆ.
ಚಾಂದಪಾಷಾ ಹಲ್ಲೆ ಮಾಡಲು ಯತ್ನಿಸಿದ ವ್ಯಕ್ತಿ ಎಂದು ತಿಳಿದು ಬಂದಿದೆ.
ಒಂದೆಡೆ ನೀರಿಗಾಗಿ ಪರದಾಟ, ಮತ್ತೊಂದೆಡೆ ಕಾವೇರಿ ನೀರು ಚರಂಡಿ ಪಾಲು! – ಅಧಿಕಾರಿಗಳೇ ಇದು ಸರಿಯೇ!?
ಆಂಜನೇಯ ದೇವಸ್ಥಾನಕ್ಕೆ ಶಾಸಕ ಶಿವರಾಜ್ ಪಾಟೀಲ್ ಹೋಗಿದ್ದರು. ಈ ವೇಳೆ ಮದ್ಯವ್ಯಸನಿ ಚಾಂದಪಾಷಾ ಶಾಸಕರನ್ನು ನೋಡಿ ಅವರ ಬಳಿಗೆ ಓಡೋಡಿ ಬಂದಿದ್ದಾನೆ. ನಂತರ ನಮ್ಮ ಮನೆಗೆ ನಲ್ಲಿ ಹಾಕಿಸಿಲ್ಲ ಅಂತ ಹೇಳಿದ್ದಾನೆ. ಚಾಂದ್ಪಾಷಾ 3-4 ಕತ್ತಿಗಳನ್ನುc ಹಿಡಿದಿದ್ದು, ಶಾಸಕರ ಮೇಲೆ ಹಲ್ಲೆ ನಡೆಸಲು ಯತ್ನಿಸಿದ್ದಾನೆ. ಕೂಡಲೆ ಅಂಗರಕ್ಷಕರು ತಡೆದಿದ್ದಾರೆ. ಬಳಿಕ ಚಾಂದ್ಪಾಷಾನನ್ನು ಮಾರ್ಕೆಟ್ ಯಾರ್ಡ್ ಠಾಣೆಗೆ ಪೊಲೀಸರಿಗೆ ಒಪ್ಪಿಸಿದ್ದಾರೆ. ಪೊಲೀಸರು ವಿಚಾರಣೆ ನಡೆಸಿದಾಗ, ಹಲ್ಲೆ ಮಾಡಲು ಹೋಗಿರಲಿಲ್ಲ, ಅವರೊಂದಿಗೆ ಮಾತನಾಡಲು ಹೋಗಿದ್ದೆ ಎಂದು ಚಾಂದ್ಪಾಷಾ ಹೇಳಿದ್ದಾನೆ. ಮಾರ್ಕೆಟ್ ಯಾರ್ಡ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.