ಬೆಂಗಳೂರು: ‘ಬಡವರ ಕಣ್ಣೀರು ಒರೆಸುವುದೇ ದೊಡ್ಡ ಕಾಲರ್ ಎನ್ನುವ ಮೂಲಕ ಡಿಕೆ ಸುರೇಶ್ʼಗೆ ಬಿ ಫಾರಂ ಪಡೆದ ಬಳಿಕ ಡಾ. ಸಿಎನ್ ಮಂಜುನಾಥ್ ಟಾಂಗ್ ಕೊಟ್ಟಿದ್ದಾರೆ.
ಏಪ್ರಿಲ್ 4 ಗುರುವಾರ ರಾಮನಗರದ ಡಿಸಿ ಕಛೇರಿಯಲ್ಲಿ ಬೆಳಿಗ್ಗೆ 10 ಗಂಟೆಗೆ ನಾಮಪತ್ರ ಸಲ್ಲಿಸ್ತಿದ್ದೇನೆ ಬಿಜೆಪಿ- ಜೆಡಿಎಸ್ ನ ಎಲ್ಲಾ ಮುಖಂಡರುಗಳು ಭಾಗವಹಿಸ್ತಾರೆ ನಮ್ಮ ಅಭಿಮಾನಿಗಳು, ಕಾರ್ಯಕರ್ತರು, ಹಿತೈಷಿಗಳೆಲ್ಲಾ ಕೈಜೋಡಿಸ್ತಾರೆ
ಡಾ.ಮಂಜುನಾಥ್ ವೈಟ್ ಕಾಲರ್ ರಾಜಕಾರಣಿ ಎಂಬ ಆರೋಪ ವಿಚಾರಕ್ಕೆ ಮಾತನಾಡಿದ ಅವರು, ನನ್ನ ಸುಧೀರ್ಘ ಅವಧಿಯಲ್ಲಿ ಲಕ್ಷಾಂತರ ಬಡ ರೋಗಿಗಳಿಗೆ ಚಿಕಿತ್ಸೆ ಕೊಟ್ಟಿದ್ದೀನಿ ನಾನು ಬಡವರಿಗೆ, ರೈತರಿಗೆ, ಕೂಲಿ ಕಾರ್ಮಿಕರಿಗೆ, ಕೃಷಿಕರಿಗೆ ಹತ್ತಿರ ಇದ್ದೇನೆ ನಾನು ಚಿಕಿತ್ಸೆ ಕೊಟ್ಟ ಶೇಕಡಾ 80 ಭಾಗ ಹಳ್ಳಿ ಭಾಗದ ಕೂಲಿ ಕಾರ್ಮಿಕರೆ
ನಾನು ನಿರ್ದೇಶಕನಾಗಿದ್ದಾಗ ಏರ್ ಕಂಡೀಷನರ್ ಕೊಠಡಿಯಲ್ಲಿ ಕೂತಿರಲಿಲ್ಲ ನಾನು ದಿನಾ ಆಸ್ಪತ್ರೆಯಲ್ಲಿ ಓಡಾಡ್ತಿರ್ತಿದ್ದೆ, 10 ಸಾವಿರ ಸ್ಟೆಪ್ಸ್ ನಡಿತಿದ್ದೆ ನಾನು ಪ್ರತಿದಿನ ಆಸ್ಪತ್ರೆಯಲ್ಲಿ ಜನತಾದರ್ಶನವನ್ನೇ ಮಾಡ್ತಿದ್ದೆ ಇದೇನು ಹೊಸದಲ್ಲ ಬಡವರ ಕಣ್ಣೀರು ಒರೆಸುವ ಮನಸ್ಥಿತಿಯೇ ದೊಡ್ಡ ಕಾಲರ್ ಎಂದು ಡಾ. ಸಿಎನ್ ಮಂಜುನಾಥ್ ಹೇಳಿದ್ದಾರೆ.
ರೈತರಿಗೆ ಗುಡ್ ನ್ಯೂಸ್: ಇಂದಿನಿಂದ ಕೊಬ್ಬರಿ ಖರೀದಿ ಪ್ರಕ್ರಿಯೆ ಆರಂಭ!
ಇನ್ನು ಈಗಾಗಲೇ ಬಿ ಫಾರಂ ಪಡೆದಿದ್ದೇನೆ, ಏಪ್ರಿಲ್ 4ರಂದು ಬಿಜೆಪಿ- ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ರಾಮನಗರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಸುತ್ತೇನೆ. ‘ನನ್ನ ಸುಧೀರ್ಘ ಅವಧಿಯಲ್ಲಿ ಲಕ್ಷಾಂತರ ಬಡ ರೋಗಿಗಳಿಗೆ ಚಿಕಿತ್ಸೆ ಕೊಟ್ಟಿದ್ದೇನೆ. ನಾನು ಬಡವರಿಗೆ, ರೈತರಿಗೆ, ಕೂಲಿ ಕಾರ್ಮಿಕರಿಗೆ ಕೃಷಿಕರಿಗೆ ಹತ್ತಿರ ಇದ್ದೇನೆ ಎಂದು ಹೇಳಿದರು.