ಮೈಸೂರು: ಪಕ್ಷದ ತತ್ವ-ಸಿದ್ಧಾಂತ ಮತ್ತು ನಾಯಕತ್ವವನ್ನು ಒಪ್ಪಿಕೊಂಡು ಬರುವ ಬೇರೆ ಪಕ್ಷಗಳ ನಾಯಕರಿಗೆ ಸ್ವಾಗತವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ನಗರದಲ್ಲಿ ಮಾತನಾಡಿದ ಅವರು, ತಮ್ಮ ಮಗ ಯತೀಂದ್ರ ಸಿದ್ದರಾಮಯ್ಯ ಅವರು ಅಮಿತ್ ಶಾ ಅವರ ಬಗ್ಗೆ ಸಿಬಿಐ ಕೋರ್ಟಿಗೆ ಸಲ್ಲಿಸಿರುವ ವರದಿಯನ್ನು ಆಧಾರವಾಗಿಟ್ಟುಕೊಂಡು ಕಾಮೆಂಟ್ ಮಾಡಿದ್ದಾರೆಯೇ ಹೊರತು ಅವರನ್ನು ಅವಮಾನಿಸಿಬೇಕೆಂಬ ಉದ್ದೇಶದಿಂದ ಯಾವುದನ್ನೂ ಹೇಳಿಲ್ಲ ಎಂದರು. ರಾಜ್ಯದ ಹಿರಿಯ ರಾಜಕಾರಣಿ ಮತ್ತು ಹಾಲಿ ಸಂಸದ ವಿ ಶ್ರೀನಿವಾಸ್ ಪ್ರಸಾದ್ ರನ್ನು ತಾವು ಭೇಟಿಯಾಗಿಲ್ಲ,
ಕ್ರೆಡಿಟ್ ಕಾರ್ಡ್ʼದಾರರಿಗೆ ಬಿಗ್ ಅಪ್ಡೇಟ್..! ಏಪ್ರಿಲ್ 1 ರಿಂದ ನಿಯಮದಲ್ಲಿ ಬದಲಾವಣೆ
ಆದರೆ ಸಚಿವರಾದ ಹೆಚ್ ಸಿ ಮಹದೇವಪ್ಪ ಮತ್ತು ಕೆ ವೆಂಕಟೇಶ್ ಭೇಟಿಯಾಗಿರುವರೆಂದು ಹೇಳಿದ ಸಿದ್ದರಾಮಯ್ಯ, ಅವರು ಏನು ಭರವಸೆ ನೀಡಿದ್ದಾರೆನ್ನುವುದನ್ನು ಅವರಿಬ್ಬರಿಗೆ ಕೇಳಬೇಕು, ಫೋನಲ್ಲೂ ತಾನು ಅವರೊಂದಿಗೆ ಮಾತಾಡಿಲ್ಲ ಎಂದರು. ಅಪರೇಶನ್ ಹಸ್ತದ ಬಗ್ಗೆ ಮಾರ್ಮಿಕವಾಗಿ ಮಾತಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಪಕ್ಷದ ತತ್ವ-ಸಿದ್ಧಾಂತ ಮತ್ತು ನಾಯಕತ್ವವನ್ನು ಒಪ್ಪಿಕೊಂಡು ಬರುವ ಬೇರೆ ಪಕ್ಷಗಳ ನಾಯಕರಿಗೆ ಸ್ವಾಗತವಿದೆ ಎಂದು ಹೇಳಿದರು.