ಶಿವಮೊಗ್ಗ: ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಬಂಡಾಯ ಸ್ಪರ್ಧೆಗೆ ಮುಂದಾಗಿದ್ದ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಅವರಿಗೆ ಸ್ವತಃ ಬಿಜೆಪಿ ಚಾಣಕ್ಯ ಅಮಿತ್ ಶಾ ಅವರು ಕರೆ ಮಾಡಿ ನೀವು ಬಂಡಾಯ ಸ್ಪರ್ಧೆ ಮಾಡದಂತೆ ಸೂಚನೆ ನೀಡಿದ್ದಾರೆ. ಹೌದು ಅಮಿತ್ ಶಾ ದೆಹಲಿಗೆ ಬರುವಂತೆಯೂ ಸೂಚನೆ ನೀಡಿದ್ದಾರೆ. ಈ ಬಗ್ಗೆ ಆಪ್ತರ ಜತೆ ಮಾಹಿತಿ ಹಂಚಿಕೊಂಡಿರುವ ಈಶ್ವರಪ್ಪ ದೆಹಲಿಗೆ ಹೋಗುವುದಾಗಿ ತಿಳಿಸಿದ್ದಾರೆ.
ಕ್ರೆಡಿಟ್ ಕಾರ್ಡ್ʼದಾರರಿಗೆ ಬಿಗ್ ಅಪ್ಡೇಟ್..! ಏಪ್ರಿಲ್ 1 ರಿಂದ ನಿಯಮದಲ್ಲಿ ಬದಲಾವಣೆ
ಆದರೆ, ಸ್ಪರ್ಧೆಯ ವಿಚಾರವಾಗಿ ನಿಲುವಿಗೆ ಬದ್ಧ ಎಂದು ಹೇಳಿರುವುದು ಕುತೂಹಲ ಮೂಡಿಸಿದೆ. ಅಮಿತ್ ಶಾ ಕರೆಗೆ ಸಕಾರಾತ್ಮಕವಾಗಿ ಸ್ಪಂದಿಸಿರುವ ಕೆಎಸ್ ಈಶ್ವರಪ್ಪ, ‘ಕೇಂದ್ರ ಸಚಿವ ಅಮಿತ್ ಶಾ ಕರೆ ಮಾಡಿದ್ದಾರೆ. ಅವರ ಕೋರಿಕೆಯ ಮೇರೆಗೆ ದೆಹಲಿಗೆ ಹೋಗುತ್ತೇನೆ. ಆದರೆ, ನನ್ನ ನಿಲುವಿನಲ್ಲಿ ಯಾವುದೇ ಬದಲಾವಣೆ ಇಲ್ಲ’ ಎಂದು ಆಪ್ತರ ಬಳಿ ಹೇಳಿಕೊಂಡಿದ್ದಾರೆ.