ಶಿವಮೊಗ್ಗ: ಬಿಜೆಪಿ ಬಂಡಾಯ ನಾಯಕ ಕೆಎಸ್ ಈಶ್ವರಪ್ಪ (KS Eshwarappa) ಅವರಿಗೆ ಮಂಗಳವಾರ ಕೇಂದ್ರ ಗೃಹಸಚಿವ ಅಮಿತ್ ಶಾ (Amit Shah) ಕರೆ ಮಾಡಿ ಮಾತನಾಡಿದ್ದು, ಬುಧವಾರ ದೆಹಲಿಗೆ (New Delhi) ಬರುವಂತೆ ಸೂಚಿಸಿದ್ದಾರೆ. ಅಮಿತ್ ಶಾ ಕರೆಗೆ ಸಕರಾತ್ಮಕವಾಗಿ ಸ್ಪಂದಿಸಿರುವ ಈಶ್ವರಪ್ಪ ಈ ಬಗ್ಗೆ ಆಪ್ತರ ವಲಯದಲ್ಲಿ ಚರ್ಚಿಸಿದ್ದಾರೆ. ಕರೆ ಮಾಡಿದ್ದಾರೆ. ದೆಹಲಿಗೆ ಹೋಗುತ್ತೇನೆ. ಆದರೆ ನನ್ನ ನಿಲುವಿನಲ್ಲಿ ಯಾವುದೇ ಬದಲಾವಣೆ ಇಲ್ಲ. ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುವ ನಿರ್ಧಾರ ಮಾಡಿದ್ದೇನೆ. ಚುನಾವಣೆಗೆ ನಿಂತೇ ನಿಲ್ಲುತ್ತೇನೆ ಎಂದು ಸ್ಪಷ್ಟನೆ ನೀಡಿದ್ದಾರೆ.
ಈ ಕುರಿತು ಶಿವಮೊಗ್ಗದಲ್ಲಿ (Shivamogga) ಪ್ರತಿಕ್ರಿಯಿಸಿದ ಈಶ್ವರಪ್ಪ, ಮೋದಿ ಅವರು ಕಾಂಗ್ರೆಸ್ನಲ್ಲಿ ಕುಟುಂಬ ಸಂಸ್ಕೃತಿ ಇದೆ ಎನ್ನುತ್ತಿದ್ದರು. ಅದೇ ರೀತಿ ರಾಜ್ಯದಲ್ಲಿ ಬಿಜೆಪಿ ಕುಟುಂಬದ ಕೈಯಲ್ಲಿದೆ. ಆ ಕುಟುಂಬದಿಂದ ಪಕ್ಷ ಮುಕ್ತಿ ಆಗಬೇಕು. ಕಾರ್ಯಕರ್ತರಿಗೆ ನೋವಾಗಿದೆ. ಕಾರ್ಯಕರ್ತರ ನೋವು ನಿವಾರಿಸಲು ಸ್ಪರ್ಧೆ ಮಾಡುತ್ತೇನೆ. ಹಿಂದುತ್ವಕ್ಕೆ ಬೆಲೆ ಸಿಗಬೇಕು,
ಕ್ರೆಡಿಟ್ ಕಾರ್ಡ್ʼದಾರರಿಗೆ ಬಿಗ್ ಅಪ್ಡೇಟ್..! ಏಪ್ರಿಲ್ 1 ರಿಂದ ನಿಯಮದಲ್ಲಿ ಬದಲಾವಣೆ
ಸಂಘಟನೆಗೆ ಬೆಲೆ ಸಿಗಬೇಕು. ಹಿಂದುಳಿದವರಿಗೆ ರಾಜ್ಯದಲ್ಲಿ ಟಿಕೆಟ್ ಕೊಟ್ಟಿಲ್ಲ. ಅವ್ಯವಸ್ಥೆ ಸರಿಪಡಿಸಲು ಸ್ಪರ್ಧೆ ಮಾಡುತ್ತಿದ್ದೇನೆ. ಕಣದಿಂದ ಹಿಂದಕ್ಕೆ ಸರಿಯಿರಿ. ಆಮೇಲೆ ಬದಲಾವಣೆ ಮಾಡೋಣ ಎಂದರು. ನಾನು ನಿಮಗೆ ಗೌರವ ಕೊಟ್ಟು ದೆಹಲಿಗೆ ಬರುತ್ತೇನೆ. ಆದರೆ ಕಣದಿಂದ ಹಿಂದಕ್ಕೆ ಮಾತ್ರ ಸರಿಯುವುದಿಲ್ಲ ಎಂದು ಹೇಳಿದ್ದೇನೆ ಎಂದರು.
ನಿಮ್ಮ ಮಗನ ರಾಜಕಾರಣ ಭವಿಷ್ಯ ನೋಡಬೇಕು ಅಂದಿದ್ದಾರೆ. ನನಗೆ ರಾಜಕೀಯ ಭವಿಷ್ಯ ಸಿಗದಿದ್ದರೂ ಬೇಡ, ಪಕ್ಷ ಶುದ್ದೀಕರಣ ಆಗಬೇಕು ಎಂದು ನನ್ನ ಮಗನೇ ಹೇಳಿದ್ದಾನೆ. ಅದಕ್ಕಾಗಿ ನಾನು ಸ್ಪರ್ಧೆ ಮಾಡುತ್ತಿದ್ದೇನೆ ಎಂದು ತಿಳಿಸಿದ್ದೇನೆ. ನಾಳೆ ಮಾತನಾಡೋಣ ಅಂದಿದ್ದಾರೆ. ನಾಳೆ ರಾತ್ರಿ ಅಮಿತ್ ಶಾ ಭೇಟಿ ಮಾಡುತ್ತೇನೆ. ನಾಳೆ ಬೆಳಗ್ಗೆಯೇ ರಾಜ್ಯಾಧ್ಯಕ್ಷರ ಬದಲಾವಣೆ ಮಾಡಿದರೆ ನಾನು ಚುನಾವಣೆಗೆ ಸ್ಪರ್ಧೆ ಮಾಡಲ್ಲ ಎಂದು ಸ್ಪಷ್ಟವಾಗಿ ಈಶ್ವರಪ್ಪ ತಿಳಿಸಿದ್ದಾರೆ.