ಗದಗ: ಎಲ್ಲರ ಮನೆಗೆ ನಲ್ಲಿ ನೀರು, ಐದು ಕೆಜಿ ಅಕ್ಕಿ, ಕೊವಿಡ್ ಲಸಿಕೆ ಕೊಟ್ಟು ಎಲ್ಲರ ಜೀವ ಉಳಿಸಿದ ಪ್ರಧಾನಿ ನರೇಂದ್ರ ಮೋದಿ ಅವರ ಋಣ ತೀರಿಸಲು ಬಿಜೆಪಿಗೆ ಮತ ಹಾಕಿ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಗದಗ ಹಾವೇರಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಮನವಿ ಮಾಡಿದರು. ದೇಶದಲ್ಲಿ ಮೋದಿಯವರು ದೊಡ್ಡ ಪ್ರಮಾಣದ ಬದಲಾವಣೆ ಮಾಡಿದ್ದಾರೆ.
ಬೆಳೆ ಹಾನಿಯಾದಾಗ ಎಂ ಎಸ್ ಪಿ ಎರಡು ಮೂರು ಪಟ್ಟು ಹೆಚ್ಚಳ ಮಾಡಿದ್ದಾರೆ. ಕಿಸಾನ್ ಸಮ್ಮಾನ್ ಯೋಜನೆ ಅಡಿಯಲ್ಲಿ ಪ್ರತಿ ರೈತರಿಗೆ 10 ಸಾವಿ ರ ರೂ. ನೀಡಿದ್ದಾರೆ. ಜಲಜೀವನ್ ಮಿಷನ್ ಅಡಿಯಲ್ಲಿ ಪ್ರತಿ ಮನೆಗೆ ಕುಡಿಯುವ ನೀರಿನ ವ್ಯವಸ್ಥೆ ಮಾಡಲಾಗಿದೆ. ಇಷ್ಟು ವರ್ಷ ಆಗಿದ್ದರೂ ಎಲ್ಲ ಮನೆಗಳಿಗೆ ನೀರು ಕೊಡುವ ಕೆಲಸ ಮಾಡಿರಲಿಲ್ಲ. ನಾನು ಸಿಎಂ ಆಗಿದ್ದಾಗ ಮನೆಗಳಿಗೆ ನಲ್ಲಿ ನೀರು ಕೊಡುವುದರಲ್ಲಿ ಕರ್ನಾಟಕ 20 ನೇ ಸ್ಥಾನದಲ್ಲಿತ್ತು. ನಾನು ಸಿಎಂ ಆದಮೇಲೆ ನಂಬರ್ ಒನ್ ಸ್ಥಾನಕ್ಕೆ ಬಂದಿದೆ.
ಇಂತಹ ವಿದ್ಯಾರ್ಥಿಗಳಿಗೆ ಸಿಗಲಿದೆ ತಿಂಗಳಿಗೆ 12,400 ರೂ. ಸ್ಕಾಲರ್ ಶಿಪ್..! ಇಂದೇ ಅರ್ಜಿ ಸಲ್ಲಿಸಿ
ಪ್ರಧಾನಿಯವರು ಕೊವಿಡ್ ಸಂದರ್ಭದಲ್ಲಿ ಎಲ್ಲರಿಗೂ ವ್ಯಾಕ್ಸಿನ್ ಕೊಡಿಸಿದರು. ಕಾಂಗ್ರೆಸ್ ನವರೂ ಲಸಿಕೆ ತೆಗೆದುಕೊಂಡಿದ್ದಾರೆ. ಜೀವ ಉಳಿಸಿದ ನರೇಂದ್ರ ಮೊದಿಯವರ ಉಪಕಾರ ತೀರಿಸಲು ಮೋದಿಯವರಿಗೆ ಮತ ಹಾಕಬೇಕು. ಮನೆ ಮನೆಗೆ ನೀರು ಕೊಟ್ಟಿರುವ ಮೋದಿಯವರ ಋಣ ತೀರಿಸಲು ಮೋದಿಗೆ ಮತ ಹಾಕಬೇಕು. ಪ್ರತಿಕುಟುಂಬಕ್ಕೆ 5 ಕೆಜಿ ಅಕ್ಕಿ ಕೊಡುತ್ತಿರುವ ಮೋದಿಯವರ ಋಣ ತೀರಿಸಲು ಬಿಜೆಪಿಗೆ ಮತ ಹಾಕಬೇಕು. ಪ್ರತಿಯೊಂದ ಮತವೂ ಮೋದಿಯವರನ್ನು ಪ್ರಧಾನಿ ಮಾಡಲು ಹಾಕಬೇಕು ಎಂದು ಮನವಿ ಮಾಡಿದರು.