ಚಿತ್ರದುರ್ಗ: ನಾವು ಪಕ್ಷದ ನಿಷ್ಠಾವಂತ ಕಾರ್ಯಕರ್ತರು, ಕಳೆದ 2019ರ ಚುನಾವಣೆಯಲ್ಲಿ ನನ್ನ ಮಗನಿಗೆ ಲೋಕಸಭೆ ಚುನಾವಣೆಗೆ ಟಿಕೆಟ್ ಕೇಳಿದ್ದೆವು. ಮುಂದಿನ ಚುನಾವಣೆಗೆ ಸ್ಪರ್ಧಿಸಲು ಅವಕಾಶ ನೀಡಲಾಗುವುದು ಎಂದು ಶಾಸಕ ಚಂದ್ರಪ್ಪ ಹೇಳಿಕೆ ನೀಡಿದ್ದಾರೆ. ಗೋವಿಂದ ಕಾರಜೋಳ ಭೇಟಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,
ನನ್ನ ಮಗ ರಘು ಚಂದನ್ ಜಿಲ್ಲೆಯಾದ್ಯಂತ ಯುವಕರ ಪಡೆ ಕಟ್ಟಿಕೊಂಡು ಪಕ್ಷ ಸಂಘಟನೆ ಮಾಡಿದ್ದ, ಹೀಗಾಗಿ ನಾವು ಟಿಕೆಟ್ ಗಾಗಿ ಹೋರಾಟ ಮಾಡಿದ್ದೇವೆ. ಆದರೆ ಅನಿವಾರ್ಯ ಕಾರಣದಿಂದ ಬಿಜೆಪಿ ಹೈಕಮಾಂಡ್ ಗೋವಿಂದ ಕಾರಜೋಳ ಅವರಿಗೆ ಟಿಕೆಟ್ ನೀಡಿರುವ ಹಿನ್ನೆಲೆಯಲ್ಲಿ, ಪ್ರಧಾನಿ ಮೋದಿ ಅವರು ಮುಖ್ಯ ಆದ್ದರಿಂದ ಪಕ್ಷದ ಅಭ್ಯರ್ಥಿಯ ಗೆಲುವಿಗೆ ಶ್ರಮಿಸಲಾಗುವುದು ಎಂದರು.