ಕಂಪ್ಲಿ : ಚುನಾವಣೆ ಎಂಬುದು ಪ್ರಜಾಪ್ರಭುತ್ವ ಹಬ್ಬ ಇದ್ದಂತೆ. ಎಲ್ಲರೂ ಖುಷಿಯಿಂದ ಪಾಲ್ಗೊಳ್ಳಬೇಕು ಎಂದು ಕಂಪ್ಲಿ ತಾಸಿಲ್ದಾರ್ ಎಸ್ ಶಿವರಾಜ್ ಶಿವಪುರ್ . ಹೇಳಿದ್ದಾರೆ. ನಗರದ ಅಂಬೇಡ್ಕರ್ ಸರ್ಕಲ್ ರಿಂದ ಪ್ರಮುಖ ರಸ್ತೆಗಳಲ್ಲಿ ಜಿಲ್ಲಾ ಸ್ವೀಪ್ ಸಮಿತಿ, ತಾಲೂಕು ಸ್ವೀಪ್ ಸಮಿತಿಯಿಂದ ಲೋಕಸಭೆ ಚುನಾವಣೆ ಅಂಗವಾಗಿ ಮತದಾನ ಜಾಗೃತಿಗಾಗಿ ಬುಧವಾರ ಆಯೋಜಿಸಿದ್ದ ಸೈಕಲ್ ಜಾತಾ ಗೆ ಚಾಲನೆ ನೀಡಿ ಮಾತನಾಡಿದರು.
ಮೇ 7 ರಂದು ನಡೆಯುವ ಲೋಕಸಭೆ ಚುನಾವಣೆಯಲ್ಲಿ ಎಲ್ಲರೂ ತಪ್ಪದೇ ಮತದಾನ ಮಾಡಬೇಕು. ಸದೃಢ ದೇಶ ಕಟ್ಟಲು ಶೇ.100 ರಷ್ಟು ಮತದಾನ ಆಗಬೇಕು. ಯಾರೊಬ್ಬರೂ ಮತದಾನ ಪ್ರಕ್ರಿಯೆಯಿಂದ ದೂರ ಉಳಿಯಬಾರದು. ಯಾವುದೇ ಆಸೆ, ಆಮೀಷಕ್ಕೆ ಬಲಿಯಾಗದೇ ಮತದಾನ ಮಾಡಬೇಕು ಎಂದು ಹೇಳಿದರು.
ತಾಲೂಕು ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿಗಳಾದ ಆರ್ ಕೆ ಶ್ರೀಕುಮಾರ್ ಅವರು ಮಾತನಾಡಿ, ಲೋಕಸಭೆ ಚುನಾವಣೆಯಲ್ಲಿ ಮತದಾನ ಪ್ರಮಾಣ ಹೆಚ್ಚಳಕ್ಕೆ ಸ್ವೀಪ್ ಕಾರ್ಯಕ್ರಮ ಮಾಡಲಾಗುತ್ತಿದ್ದು, ಪ್ರತಿಯೊಬ್ಬರೂ ತಪ್ಪದೇ ಮತ ಚಲಾಯಿಸಬೇಕು ಎಂದರು.
ಕಂಪ್ಲಿ ಪುರಸಭೆಯ ಮುಖ್ಯ ಅಧಿಕಾರಿಗಳು ಮಾತನಾಡಿ, ಮೇ 7 ರಂದು ನಡೆಯುವ ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ನಿರಂತರವಾಗಿ ಸ್ವೀಪ್ ಕಾರ್ಯಕ್ರಮ ಮಾಡಲಾಗುತ್ತಿದೆ. ಪ್ರಜಾಪ್ರಭುತ್ವ ಹಬ್ಬದಲ್ಲಿ ಎಲ್ಲರೂ ಪಾಲ್ಗೊಳ್ಳಬೇಕು ಎಂದರು. ನಗರದ ವಿವಿಧ ವೃತ್ತಗಳಲ್ಲಿ ನಡೆದ ಸೈಕಲ್ ಜಾತನಲ್ಲಿ ಮತದಾನ ಜಾಗೃತಿ ಗೀತೆಗಳು, ಘೋಷಣೆಗಳ ಮೂಲಕ ಅರಿವು ಮೂಡಿಸಲಾಯಿತು.
ಈ ಸಂದರ್ಭದಲ್ಲಿ ಕಂಪ್ಲಿ ಪುರಸಭೆ ಮುಖ್ಯ ಅಧಿಕಾರಿಗಳು. ಕಂಪ್ಲಿ ತಹಸಿಲ್ದಾರ್ ಕಚೇರಿ ಎಲ್ಲಾ ಸಿಬ್ಬಂದಿಗಳು. ಕಂಪ್ಲಿ ಶಿಕ್ಷಣ ಇಲಾಖೆ ಸಿಬ್ಬಂದಿಗಳು ಹಾಗೂ ಕಂಪ್ಲಿ ತಾಲೂಕು ಪಂಚಾಯತಿ ಎಲ್ಲಾ ಸಿಬ್ಬಂದಿಗಳು ಈ ಸೈಕಲ್ ಜಾತ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು