ಬೆಂಗಳೂರು: ಗ್ರಾಮಾಂತರ ಕ್ಷೇತ್ರದಲ್ಲಿ ಧರ್ಮಯುದ್ಧ ನಡೆಯುತ್ತಿದೆ. ಇಲ್ಲಿಯ ಅಧರ್ಮದ ರಾಜಕಾರಣಕ್ಕೆ ಉತ್ತರ ಕೊಡಲು ಮಂಜುನಾಥ್ ಅವರನ್ನು ಕಣಕ್ಕಿಳಿಸಿರೋದು ಎಂದು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ (H.D Kumaraswamy) ಹೇಳಿದ್ದಾರೆ.
ಅಮಿತ್ ಶಾಗೆ ನೈತಿಕತೆ ಇಲ್ಲ ಅಂತ ಕೇಳೋ ನಿಮಗೆ ಯಾವ ನೈತಿಕತೆ ಇದೆ?: ಆರ್ ಅಶೋಕ್!
ನಗರದಲ್ಲಿ ಮಾತನಾಡಿದ ಅವರು, ಮಂಜುನಾಥ್ (Dr.C.N Manjunath) ಅವರು ವೈದ್ಯಕೀಯ ಕ್ಷೇತ್ರದಲ್ಲಿ ಹೆಸರು ಮಾಡಿದ್ದಾರೆ. ಈ ಕಾರಣಕ್ಕೆ ಅಮಿತ್ ಶಾ ಮಂಜುನಾಥ್ ಅವರನ್ನು ಬಿಜೆಪಿ ಅಭ್ಯರ್ಥಿ ಮಾಡಿದ್ದಾರೆ. ಬಿಜೆಪಿ-ಜೆಡಿಎಸ್ (BJP-JDS) ಒಂದೇ ದೇಹದ ಎರಡು ಕಣ್ಣುಗಳಿದ್ದ ಹಾಗೆ. ಕಳೆದ ಎರಡು ಚುನಾವಣೆಯಲ್ಲಿ ನನ್ನ ಮೇಲೆ ವಿಶ್ವಾಸವಿಟ್ಟು ಗೆಲ್ಲಿಸಿದ್ದೀರಿ. ಇಡೀ ರಾಜ್ಯದಲ್ಲಿ ನಾನು ಚುನಾವಣೆಗೆ ಕೆಲಸ ಮಾಡ್ತಾ ಇದ್ದೀನಿ. ನನ್ನ ಹೃದಯ ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿದೆ. ನಾನು ರಾಮನಗರ ಬಿಟ್ಟು ಹೋಗಲ್ಲ. ಇವತ್ತು ಅನಿವಾರ್ಯವಾಗಿ ಬಿಜೆಪಿ ಜೊತೆ ಅಭಿವೃದ್ಧಿಗಾಗಿ ಕೈ ಜೋಡಿಸಿದ್ದೇವೆ. ದಯಮಾಡಿ ನನ್ನ ಚನ್ನಪಟ್ಟಣದ ಜನರು ಕ್ಷಮಿಸಬೇಕು ಎಂದಿದ್ದಾರೆ.
ಏ.4ಕ್ಕೆ ನಾನು ಮಂಡ್ಯದಲ್ಲಿ ನಾಮಪತ್ರ ಸಲ್ಲಿಸಿ ಬಳಿಕ ಇಲ್ಲಿಗೆ ಬರುತ್ತೇನೆ. ಅಂದು ಮಂಜುನಾಥ್ ಅವರು ನಾಮಪತ್ರ ಸಲ್ಲಿಸುತ್ತಾರೆ. ಅಂದು ಎಲ್ಲಾ ವಿಚಾರವನ್ನು ಪ್ರಸ್ತಾಪ ಮಾಡಲಿದ್ದೇನೆ. ದೇಶದ ಜನರು ಮೋದಿಯವರನ್ನು ಬೆಂಬಲಿಸಿದ್ದಾರೆ. ರಾಜ್ಯದಲ್ಲಿ 28 ಮೈತ್ರಿ ಅಭ್ಯರ್ಥಿಗಳು ಗೆಲ್ಲಬೇಕು. ಚನ್ನಪಟ್ಟಣ ಗಂಡು ಮೆಟ್ಟಿದ ನೆಲ. ಇಲ್ಲಿ ಅಮಿತ್ ಶಾ ಪ್ರಚಾರಕ್ಕೆ ಚಾಲನೆ ನೀಡಿದ್ದಾರೆ. ಕಾಂಗ್ರೆಸ್ ನಾಯಕರು ಜನರಿಗೆ ಆಮೀಷ ತೋರಿಸುತ್ತಿದ್ದಾರೆ. ಸೀರೆ, ಕುಕ್ಕರ್ನ್ನು ಜನರಿಗೆ ನೀಡ್ತಾ ಇದ್ದಾರೆ. ಜನರಿಗಾಗಿ ಮಿಡಿಯುವ ಮಂಜುನಾಥ್ ಅವರನ್ನು ಗೆಲ್ಲಿಸಿ ಉತ್ತರ ಕೊಡಬೇಕು ಎಂದು ಅವರು ಹೇಳಿದ್ದಾರೆ.