ಬೆಂಗಳೂರು : ಕೇಂದ್ರ ಲೋಕಸಭಾ ಕ್ಷೇತ್ರದ ಕೈ ಅಭ್ಯರ್ಥಿ ಮನ್ಸೂರ್ ಅಲಿಖಾನ್ ಇಂದು ನಾಮಪತ್ರ ಸಲ್ಲಿಸಿದ್ದಾರೆ. ನಾಮಪತ್ರ ಸಲ್ಲಿಕೆಗೂ ಮುನ್ನ ಸಂಪಂಗಿರಾಮ ನಗರದ ಗಣೇಶ ದೇವಾಲಯಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.ಬಳಿಕ ಸಾವಿರಾರು ಕಾರ್ಯಕರ್ತರ ಜೊತೆ ರ್ಯಾಲಿ ಮೂಲಕ ಬಿಬಿಎಂಪಿ ಕೇಂದ್ರ ಕಚೇರಿಗೆ ಆಗಮಿಸಿದ ಮನ್ಸೂರ್ ಆಲಿಖಾನ್ ಉಮೇದುವಾರಿಕೆ ಸಲ್ಲಿಸಿದ್ದಾರೆ.
Heat Wave: ಬೆಂಗಳೂರಲ್ಲಿ ಹೆಚ್ಚಾದ ಬಿಸಿ ಗಾಳಿ: ಎಚ್ಚರದಿಂದಿರಲು ಆರೋಗ್ಯ ಇಲಾಖೆ ಸೂಚನೆ!
ಮುಸ್ಲಿಂ ಮತ್ತು ಕ್ರೈಸ್ತ ಮತಗಳ ಜೊತೆಗೆ ಹಿಂದೂಗಳ ಮತ ಗಳಿಸಿಕೊಂಡ್ರೆ ಬೆಂಗಳೂರು ಕೇಂದ್ರ ಗೆಲ್ಲೋದು ಸುಲಭ ಎಂಬ ಲೆಕ್ಕಾಚಾರದಲ್ಲಿರುವ ಮನ್ಸೂರ್ ಅಲಿ ಖಾನ್ ಜಾತ್ಯಾತೀತ ನೆಲೆಗಟ್ಟಿನಲ್ಲಿ ಸರ್ವ ಧರ್ಮ ಸಮನ್ವಯ ಎಂಬ ತತ್ವದಲ್ಲಿ ಇಂದು ನಾಮಪತ್ರ ಸಲ್ಲಿಕೆಗೂ ಮುನ್ನ ಸಂಪಂಗಿರಾಮ ನಗರದ ಗಣೇಣ ದೇವಸ್ಥಾನಕ್ಕೆ ಭೇಟಿ ಕೊಟ್ಟು ಒಂದು ಸಂದೇಶ ರವಾನೆ ಮಾಡೋ ಪ್ರಯತ್ನ ಮಾಡಿದ್ದಾರೆ.