ಹುಬ್ಬಳ್ಳಿ’:– ಯುಗಾದಿ ಹಬ್ಬದ ಪ್ರಯುಕ್ತ ಊರುಗಳಿಗೆ ತೆರಳುವವರಿಗೆ ಅನುಕೂಲವಾಲೆಂದು ವಾಯುವ್ಯ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಹಬ್ಬಕ್ಕೆ ವಿಶೇಷ ಬಸ್ಗಳ ವ್ಯವಸ್ಥೆ ಮಾಡಿದೆ.
ಯುಗಾದಿ ಹಬ್ಬಕ್ಕೆ ಸಾಲು ಸಾಲು ರಜೆ ರಜೆಗಳು ಇವೆ. ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯಿಂದ ಹೆಚ್ಚುವರಿ ವಿಶೇಷ ಬಸ್ಸುಗಳ ವ್ಯವಸ್ಥೆ ಮಾಡಲಾಗಿದೆ ಎಂದು ಹುಬ್ಬಳ್ಳಿ ಗ್ರಾಮಾಂತರ ವಿಭಾಗೀಯ ನಿಯಂತ್ರಣಾಧಿಕಾರಿ ಎಚ್. ರಾಮನಗೌಡರ ಮಾಹಿತಿ ನೀಡಿದ್ದಾರೆ.
ಮುಸಲ್ಮಾನರ ರಂಜಾನ್ ಹಬ್ಬ ಕೂಡ ಇದೇ ಸಮಯದಲ್ಲಿ ಬಂದಿದ್ದು, ಒಟ್ಟಿಗೆ ಏಪ್ರಿಲ್ 6 ರಿಂದ 15 ರವರೆಗೆ ಸಿಗುವ ಸಾಧ್ಯತೆಗಳಿವೆ ವಿಶೇಷ ಬಸ್ಸುಗಳ ವ್ಯವಸ್ಥೆ ಮಾಡಲಾಗಿದೆ ಎಂದರು.
ಸರ್ಕಾರಿ, ಖಾಸಗಿ ಉದ್ಯೋಗಿಗಳು, ಉದ್ಯಮಿಗಳು ಹಬ್ಬದ ಆಚರಣೆಗಾಗಿ ಊರುಗಳಿಗೆ ಪ್ರಯಾಣ ಬೆಳೆಸಲಿದ್ದು, ಅವರ ಅನುಕೂಲಕ್ಕಾಗಿ ಏಪ್ರಿಲ್ 5ರಂದು ಶುಕ್ರವಾರ ದಿಂದ 7 ರವಿವಾರ ವವರೆಗೆ ಬೆಂಗಳೂರು, ಪುಣೆ, ಗೋವಾ ಮತ್ತಿತರ ಪ್ರಮುಖ ಸ್ಥಳಗಳಿಂದ ಹುಬ್ಬಳ್ಳಿಗೆ ಹೆಚ್ಚುವರಿ ವಿಶೇಷ ಬಸ್ಗಳ ವ್ಯವಸ್ಥೆ ಮಾಡಲಾಗಿದೆ.
ಈ ಅವಧಿಯಲ್ಲಿ ಜಿಲ್ಲೆಯೊಳಗೆ ವಿವಿಧ ಸ್ಥಳಗಳು ಹಾಗೂ ಅಕ್ಕಪಕ್ಕದ ಜಿಲ್ಲೆಗಳ ನಡುವೆಯೂ ಸಹ ಪ್ರಯಾಣಿಕರ ಹೆಚ್ಚಳಕ್ಕೆ ತಕ್ಕಂತೆ ಹೆಚ್ಚುವರಿ ಬಸ್ಸುಗಳನ್ನು ಬಿಡಲಾಗುತ್ತದೆ , ಹೆಚ್ಚಿನ ಸೀಟುಗಳನ್ನು ಕಾಯ್ದಿರಿಸಿದರೆ ಏಕಮುಖ ಪ್ರಯಾಣಕ್ಕೆ ಶೇಕಡ 5ರಷ್ಟು ರಿಯಾಯಿತಿ ನೀಡಲಾಗುತ್ತದೆ. ರವಿವಾರ, 9 ರಂದು ಮಂಗಳವಾರ ಚಾಂದ್ರಮಾನ ಯುಗಾದಿ, 11ರಂದು ಗುರುವಾರ ರಂಜಾನ್,13 ರಂದು ಎರಡನೇ ಶನಿವಾರ ಹಾಗೂ14 ರಂದು ರವಿವಾರ ಹೀಗೆ ಎಂಟು ದಿನಗಳ ಅವಧಿಯಲ್ಲಿ 5 ಸಾರ್ವಜನಿಕ ರಜೆಗಳು ಇವೆ ಎಂದು ರಾಮನಗೌಡರ ಮಾಹಿತಿ ನೀಡಿದರು