ನವದೆಹಲಿ: ಶಿವಸೇನೆ ಉದ್ಧವ್ ಬಣದ ಜತೆ ಕಾಂಗ್ರೆಸ್ ಸೀಟು ಹಂಚಿಕೆ ಬೆನ್ನಲ್ಲೇ ಕಾಂಗ್ರೆಸ್ನಲ್ಲಿಭುಗಿಲೆದ್ದ ಅಸಮಾಧಾನ ಭುಗಿಲೆದ್ದಿತ್ತು. ವಾಯವ್ಯ ಮುಂಬಯಿ ಕ್ಷೇತ್ರದಿಂದ ಟಿಕೆಟ್ ವಂಚಿತರಾಗಿದ್ದ ಸಂಜಯ್, ತಮ್ಮ ಬದಲಿಗೆ ಶಿವಸೇನೆ ಉದ್ಧವ್ ಬಣದ ಅಭ್ಯರ್ಥಿಗೆ ಕಾಂಗ್ರೆಸ್ ಮಣೆ ಹಾಕಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದರು.
ಇದರ ಬೆನ್ನಲ್ಲೇ ಮಹಾರಾಷ್ಟ್ರದ ಕಾಂಗ್ರೆಸ್ ಹಿರಿಯ ಮುಖಂಡ ಸಂಜಯ್ ನಿರುಪಮ್ ಅವರನ್ನು ಪಕ್ಷ ವಿರೋಧಿ ಚಟುವಟಿಕೆಗಳ ಆರೋಪದ ಮೇಲೆ ಪಕ್ಷದಿಂದ ಉಚ್ಛಾಟನೆ ಮಾಡಲಾಗಿದೆ. ಸಂಜಯ್ ಉಚ್ಚಾಟನೆಗೆ ಸೂಚಿಸಿ ಮಹಾರಾಷ್ಟ್ರ ಕಾಂಗ್ರೆಸ್ ಘಟಕವು ಹೈಕಮಾಂಡ್ಗೆ ಶಿಫಾರಸು ಮಾಡಿತ್ತು. ಬುಧವಾರ ರಾತ್ರಿ ದಿಲ್ಲಿಯಲ್ಲಿ ಚರ್ಚೆ ಬಳಿಕ ಹೈಕಮಾಂಡ್ ಉಚ್ಛಾಟನೆ ನಿರ್ಧಾರ ಕೈಗೊಂಡಿದೆ. ಇದಕ್ಕೂ ಮುನ್ನ ಬುಧವಾರ ಬೆಳಗ್ಗೆಯೇ ಸಂಜಯ್ ಅವರನ್ನು ‘ಸ್ಟಾರ್ ಪ್ರಚಾರಕ’ರ ಪಟ್ಟಿಯಿಂದ ಕೈಬಿಡಲಾಗಿತ್ತು.
Child Falls Into Borewell: ಕೊಳವೆ ಬಾವಿಗೆ ಬಿದ್ದ ಕಂದನ ನರಳಾಟ..! ಕ್ಯಾಮೆರಾದಲ್ಲಿ ಸೆರೆಯಾಯ್ತು ಮಗುವಿನ ಕಾಲು
‘ಮುಂಬಯಿನ ಆರು ಕ್ಷೇತ್ರಗಳ ಪೈಕಿ ಶಿವಸೇನೆಗೆ ಐದು ಬಿಟ್ಟುಕೊಡಲಾಗಿದೆ. ಕಾಂಗ್ರೆಸ್ಗೆ ಭಿಕ್ಷೆ ಎಂಬಂತೆ ಒಂದು ಕ್ಷೇತ್ರ ಬಿಟ್ಟುಕೊಡಲಾಗಿದೆ. ಇದಕ್ಕೆ ಹೈಕಮಾಂಡ್ ತಲೆದೂಗಿದೆ,’’ ಎಂದು ಬಹಿರಂಗವಾಗಿಯೇ ವರಿಷ್ಠರ ವಿರುದ್ಧ ಅಸಮಾಧಾನ ಹೊರಹಾಕಿದ್ದರು. ಆದರೆ, ಹೈಕಮಾಂಡ್ ಇವರ ಆಕ್ರೋಶಕ್ಕೆ ಸೊಪ್ಪು ಹಾಕದೆ ಕಳೆದ 20 ದಿನಗಳಿಂದ ಅಲಕ್ಷ್ಯ ತೋರಿದ್ದರಿಂದ ಸಂಜಯ್ ಮತ್ತಷ್ಟು ಕೆರಳಿದ್ದರು.