ಕೋಲಾರ: ಕಾಂಗ್ರೆಸ್ ಅಭ್ಯರ್ಥಿ ಕೆವಿ ಗೌತಮ್ ನಾಮಪತ್ರ ಸಲ್ಲಿಕೆ ಹಿನ್ನೆಲೆ ನಗರ ದೇವತೆ ಕೋಲಾರಮ್ಮ ದೇವಸ್ಥಾನಕ್ಕೆ ಕೆವಿ ಗೌತಮ್ ಭೇಟಿ ನೀಡಿ ಮೂಜೆ ಸಲ್ಲಿಸಿದ್ದಾರೆ. ವಿಶೇಷ ಪೂಜೆ ಸಲ್ಲಿಸಿ ಅಮ್ಮನವರ ಆಶೀರ್ವಾದ ಪಡೆದರು. ಬಳಿಕ ಮೆಥೋಡಿಸ್ಟ್ ಚರ್ಚ್ ಗೆ ಭೇಟಿ ನೀಡಿ ಕ್ರೈಸ್ತ ದೇವರಿಗೆ ನಮಿಸಿ ಪಾದ್ರಿಗಳಿಂದ ಆಶೀರ್ವಾದ ಪಡೆದರು.
ನಂತರ ಕೋಲಾರ ಕ್ಲಾಕ್ ಟವರ್ ಬಳಿ ಇರುವ ದರ್ಗಾಗೆ ಭೇಟಿ ನೀಡಿ ದರ್ಗಾದಲ್ಲಿ ಪ್ರಾರ್ಥನೆ ಸಲ್ಲಿಸಿ ಮೌಲ್ವಿ ಗಳಿಂದ ಆಶೀರ್ವಾದ ಕೂಡ ಪಡೆದರು. ಈ ಸಂದರ್ಭದಲ್ಲಿ ಸಚಿವ ಡಾ.ಸುಧಾಕರ್, ಶಾಸಕರಾದ ಕೊತ್ತೂರು ಮಂಜುನಾಥ್, ಎಂಎಲ್ ಸಿ ಅನಿಲ್ ಕುಮಾರ್, ಕಾಂಗ್ರೆಸ್ ಮುಖಂಡ ಆದಿನಾರಾಯಣ, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಲಕ್ಷ್ಮೀನಾರಾಯಣ ಸೇರಿದಂತೆ ಮುಂತಾದವರು ಸಾಥ್ ನೀಡಿದರು.