ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ದಕ್ಷಿಣ ವಲಯದ ಕಚೇರಿಯಲ್ಲಿ ಬಿಜೆಪಿ ರಾಷ್ಟ್ರೀಯ ಯುವ ಮೋರ್ಚಾ ಅಧ್ಯಕ್ಷರು ಬೆಂಗಳೂರು ದಕ್ಷಿಣ ಕ್ಷೇತ್ರದ ಸಂಸದರಾದ ಲೋಕಸಭಾ ಕ್ಷೇತ್ರದ ಬಿಜೆಪಿ ಹಾಗೂ ಜೆಡಿಎಸ್ ಪಕ್ಷದ ಮೈತ್ರಿ ಅಭ್ಯರ್ಥಿ ತೇಜಸ್ವಿ ಸೂರ್ಯ ನಾಮಪತ್ರ ಸಲ್ಲಿಸಿದರು.
ತೆರೆದ ಕೊಳವೆ ಬಾವಿಗೆ ಬಿದ್ದು ಸಾವು ಗೆದ್ದು ಬಂದ ಸಾತ್ವಿಕ್ ಬಗ್ಗೆ ಎಚ್.ಡಿ.ಕುಮಾರಸ್ವಾಮಿ ಟ್ವೀಟ್!
ಬೃಹತ್ ಮೆರವಣಿಗೆ ಮೂಲಕ ಜಯನಗರದ BBMP ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದರು. ಈ ವೇಳೆ ತೇಜಸ್ವಿ ಸೂರ್ಯಗೆ ಕೇಂದ್ರ ಸಚಿವ ಅನುರಾಗ್ ಸಿಂಗ್ ಠಾಕೂರ್ ಸಾಥ್ ನೀಡಿದರು.
ಆ ನಂತರ ಮಾಧ್ಯಮಗಳ ಜೊತೆ ಮಾತನಾಡಿದ ಅವರು,‘ ಕಾಂಗ್ರೆಸ್ ನ ಎಲ್ಲ ಕಾರ್ಡ್ಗಳು ರಿಜೆಕ್ಟ್ ಆಗುತ್ತವೆ. ಕಾಂಗ್ರೆಸ್ ಪಕ್ಷವೇ ಎಕ್ಸಪೈರ್ ಆಗಿದೆ. ಈಗ ಮೋದಿ ನಾಯಕತ್ವಕ್ಕೆ ಬೆಂಬಲ ಸಿಗುತ್ತದೆ. ನೋ ಬಾಲ್ ಮೇಲೆ ಸಿಕ್ಸರ್ ಹೊಡೆಯುತ್ತೇನೆ. ಜೊತೆಗೆ ಈ ಬಾರಿ ದಕ್ಷಿಣ ಕ್ಷೇತ್ರದಲ್ಲಿ ಬಿಜೆಪಿ 5 ಲಕ್ಷ ಅಂತರದಿಂದ ಗೆಲ್ಲುತ್ತದೆ ಎಂದರು.