ಮೈಸೂರು : ಮೈಸೂರಿನ ಬಿಜೆಪಿ ಅಭ್ಯರ್ಥಿ ಯದುವೀರ್ ಒಡೆಯರ್ ಬಗ್ಗೆ ನಾನು ಮಾತನಾಡಲು ಹೋಗುವುದಿಲ್ಲ. ಮಾತನಾಡಿದರೂ ಏನೂ ಪ್ರಯೋಜನವಿಲ್ಲ. ಜನರ ಸೇವೆ ಮಾಡುವವರನ್ನು ಪ್ರಜಾ ಪ್ರಭುತ್ವ ವ್ಯವಸ್ಥೆಯಲ್ಲಿ ಜನರು ನೆನಪಿಟ್ಟುಕೊಳ್ಳುತ್ತಾರೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ಮಾತನಾಡಿದ ಅವರು, ಮೈಸೂರು ಕ್ಷೇತ್ರದಲ್ಲಿ ಒಕ್ಕಲಿಗರಿಗೆ ಟಿಕೆಟ್ ಸಿಕ್ಕಿ 40 ವರ್ಷವಾಗಿತ್ತು. ಆದ ಕಾರಣ ನಾನು ಮತ್ತು ಸಿದ್ದರಾಮಯ್ಯ ಇಬ್ಬರು ಚರ್ಚೆ ನಡೆಸಿ ಲಕ್ಷ್ಮಣ್ ಅವರನ್ನು ಅಭ್ಯರ್ಥಿಯನ್ನಾಗಿ ಕಣಕ್ಕೆ ಇಳಿಸಿದ್ದೇವೆ. ಈ ಸಿದ್ದʼರಾಮʼನಿಗೆ ಲಕ್ಷ್ಮಣಗೌಡ ಎಂದರು.
ಒಂದೇ ಸೀರೆಯನ್ನು ಪದೇ ಪದೇ ಧರಿಸುತ್ತಿದ್ದೀರಾ!?, ಹುಷಾರ್ ಕ್ಯಾನ್ಸರ್ ಬರಬಹುದು!
ವಿಶ್ವನಾಥ್, ಚಂದ್ರಪ್ರಭಾ ಅರಸ್, ಸಿ.ಎಚ್.ವಿಜಯಶಂಕರ್, ಶ್ರೀಕಂಠದತ್ತ ಒಡೆಯರ್ ಇವರಿಗೆ ಟಿಕೆಟ್ ನೀಡಿದ್ದೆವು. ಕೆಪಿಸಿಸಿ ಅಧ್ಯಕ್ಷರಾಗಿರುವ ಕಾರಣ ಸಮುದಾಯಕ್ಕೆ ಅವಕಾಶ ಒದಗಿಸಬೇಕು ಎಂದು ಹಲವಾರು ಮುಖಂಡರು ಮನವಿ ಮಾಡಿದ್ದರು. ಆದ ಕಾರಣ ಈ ಬಾರಿ ಎಂಟು ಮಂದಿ ಒಕ್ಕಲಿಗರಿಗೆ ಅವಕಾಶ ಮಾಡಿಕೊಡಲಾಗಿದೆ. ನಾವು ಜಾತಿ ರಾಜಕಾರಣ ಮಾಡುವವರಲ್ಲ, ನೀತಿ ಮೇಲೆ ರಾಜಕಾರಣ ಮಾಡುವವರು. ನಾವು ಸಮಾಜದ ಒಳಿತಿಗೆ ಕೆಲಸ ಮಾಡುವವರು. ಆದ ಕಾರಣ ಸಮಾಜದ ಬಗ್ಗೆ ಕಳಕಳಿ ಹೊಂದಿರುವ ಎಂ ಲಕ್ಷ್ಮಣ್ ಅವರನ್ನು ಆಯ್ಕೆ ಮಾಡಿದ್ದೇವೆ. ದಿನದ 24 ಗಂಟೆಯೂ ಜನರ ಸೇವೆಗೆ ಇವರು ಸಿಗುತ್ತಾರೆ ಎಂದು ಹೇಳಿದರು.