ಬಿಹಾರ:- ವಿಷಪೂರಿತ ಹಾವು ನಂಬಬಹುದು, ಆದ್ರೆ ಬಿಜೆಪಿ ನಂಬಲಾಗದು ಎಂದು ಮಮತಾ ಬ್ಯಾನರ್ಜಿ ಹೇಳಿದ್ದಾರೆ.
ಈ ಸಂಬಂಧ ಮಾತನಾಡಿದ ಅವರು,2024 ರ ಲೋಕಸಭೆ ಚುನಾವಣೆಗೆ ಎಲ್ಲಾ ಪಕ್ಷಗಳು ತಮ್ಮ ತಯಾರಿಯಲ್ಲಿ ನಿರತವಾಗಿವೆ. ಬಿಜೆಪಿ ಚುನಾವಣಾ ನೀತಿ ಸಂಹಿತೆ ಪಾಲಿಸುತ್ತಿಲ್ಲ. ಶಿತಾಲ್ಕುಚಿಯಲ್ಲಿ ಗುಂಡಿಕ್ಕಿ ಕೊಂದವರು ಈಗ ಬಿರ್ಭೂಮ್ನಲ್ಲಿ ಬಿಜೆಪಿ ಅಭ್ಯರ್ಥಿಯಾಗಿದ್ದಾರೆ ಎಂದು ಆರೋಪಿಸಿದರು.
ಪ್ರಧಾನಿ ಮೋದಿಯಂತ ನಾಯಕರು ದೇಶದಲ್ಲಿ ಮತ್ತೊಬ್ಬರಿಲ್ಲ: ಬಸವರಾಜ ಬೊಮ್ಮಾಯಿ
ಕಳೆದ 3 ವರ್ಷಗಳಿಂದ ವಸತಿ ಯೋಜನೆಗೆ ಹಣ ನೀಡುತ್ತಿಲ್ಲ, ರಸ್ತೆ ಹಣ ನೀಡುತ್ತಿಲ್ಲ, ಬಂಗಾಳ ಉಳಿದರೆ ದೇಶ ಉಳಿಯುತ್ತದೆ. ಕೇಂದ್ರ ತನಿಖಾ ಸಂಸ್ಥೆಗಳು, ಗಡಿ ಭದ್ರತಾ ಪಡೆ (ಬಿಎಸ್ಎಫ್) ಮತ್ತು ಕೇಂದ್ರ ಕೈಗಾರಿಕಾ ಭದ್ರತಾ ಪಡೆ (ಸಿಐಎಸ್ಎಫ್) ಬಿಜೆಪಿಯ ಆದೇಶದಂತೆ ಕೆಲಸ ಮಾಡುತ್ತಿವೆ ಎಂದು ಆರೋಪಿಸಿದರು.
ಬಿಜೆಪಿ ಒಂದು ರಾಷ್ಟ್ರ, ಒಂದು ಪಕ್ಷ ಸಿದ್ಧಾಂತವನ್ನು ಅನುಸರಿಸುತ್ತಿದೆ, ಕೇಂದ್ರೀಯ ತನಿಖಾ ಸಂಸ್ಥೆಗಳ ಮುಂದೆ ತನ್ನ ಪಕ್ಷ ಟಿಎಂಸಿ ತಲೆ ಬಾಗದು, ಲೋಕಸಭಾ ಚುನಾವಣೆಗೂ ಮುನ್ನ ಬಿಎಸ್ಎಫ್ ಸ್ಥಳೀಯರಿಗೆ ಕಿರುಕುಳ ನೀಡುವ ಘಟನೆಗಳು ಕಂಡು ಬಂದರೆ ಪೊಲೀಸರಿಗೆ ದೂರು ನೀಡಿ ಎಂದು ಹೇಳಿದ್ದಾರೆ. ಸಿಎಎ ಮತ್ತು ಎನ್ಆರ್ಸಿ ಜಾರಿಗೆ ತರಲು ನಾವು ಬಿಡುವುದಿಲ್ಲ ಎಂದರು