ತುಮಕೂರು: ತುಮಕೂರು ಜಿಲ್ಲೆಯಲ್ಲಿ ಮನಕಲಕುವ ಘಟನೆ ನಡೆದಿದೆ. ಬಿಸಿಲಿನ ತಾಪಕ್ಕೆ ಕೆರೆಯಲ್ಲಿದ್ದ ರಾಶಿ ರಾಶಿ ಮೀನುಗಳು ಸಾವನ್ನಪ್ಪಿದೆ. ನೀರಿಲ್ಲದೇ ವಿಲವಿಲನೇ ಒದ್ದಾಡಿ ಸಾವಿರಾರು ಮೀನುಗಳು ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆ ಪಾವಗಡ ತಾಲೂಕಿನ ಕನ್ನಮೇಡಿ ಕೆರೆಯಲ್ಲಿ ನಡೆದಿದೆ.
ಸುಮಾರು 108 ಎಕರೆ ಪ್ರದೇಶದಲ್ಲಿರುವ ಕನ್ನಮೇಡಿ ಕೆರೆಯಾಗಿದ್ದು, ಮಳೆಯಿಲ್ಲದೇ ಸಂಪೂರ್ಣವಾಗಿ ನೀರಿಲ್ಲದೇ ಖಾಲಿ ಖಾಲಿಯಾಗಿದೆ. ಬಿಸಿಲಿನ ತಾಪಕ್ಕೆ ನೀರಿಲ್ಲದೇ ಕೆರೆಯಲ್ಲಿದ್ದ ಮೀನುಗಳು ವಿಲವಿಲನೇ ಒದ್ದಾಡಿ ಸಾಯುತ್ತಿವೆ. ಬಿಸಿಲಿನ ತಾಪಮಾನಕ್ಕೆ ಸ್ಥಳೀಯರಲ್ಲಿ ಹೆಚ್ಚಾಯ್ತು ಆತಂಕ ಹೆಚ್ಚಾಗಿದೆ.