ಗದಗ:- ಕ್ಷುಲ್ಲಕ ಕಾರಣಕ್ಕೆ ನಡು ರಸ್ತೆಯಲ್ಲೇ ಸಾರಿಗೆ ಸಂಸ್ಥೆ ಬಸ್ ಚಾಲಕನ ಮೇಲೆ ಹಲ್ಲೆ ನಡೆಸಿ ಅವಾಚ್ಯ ಶಬ್ದಗಳಿಂದ ನಿಂದಿಸಿದ ಘಟನೆ ಗದಗ ಜಿಲ್ಲೆಯ ರೋಣ ಪಟ್ಟಣದಲ್ಲಿ ಜರುಗಿದೆ.
ಎ ಎಂ ಮಡಿವಾಳರ ಹಲ್ಲೆಗೊಳಗಾದ ಬಸ್ ಚಾಲಕ ಎನ್ನಲಾಗಿದೆ. ಪೊಲೀಸ್ ಸಿಬ್ಬಂದಿ ಮುಂದೆಯೇ ಅವಾಚ್ಯ ಶಬ್ದಗಳಿಂದ ನಿಂದಿಸಿದ ಹಲ್ಲೆ ಎಕ್ಸ್ಕ್ಲೂಸಿವ್ ವಿಡಿಯೋ AINಗೆ ಲಭ್ಯವಾಗಿದೆ. ಬಸ್ ನಿಲ್ಲಿಸದೇ ಇರೋದೇ ಹಲ್ಲೆಗೆ ಕಾರಣ ಅನ್ನೋ ಆರೋಪ ಕೇಳಿ ಬಂದಿದೆ.
ನರಗುಂದ ತಾಲೂಕಿನ ಕೊಣ್ಣೂರಿನಿಂದ ರೋಣಕ್ಕೆ ಬಸ್ ತೆರಳ್ತಿತ್ತು ಎನ್ನಲಾಗಿದ್ದು, ರೋಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಜರುಗಿದೆ.