ಶಿವಮೊಗ್ಗ: ನಮ್ಮ ಹಿಂದೂ ಹುಡುಗರು ಕೊಡುವ ದಾಖಲಾತಿ ಪೋರ್ಜರಿ ಮಾಡಿ ಅವರ ಹೆಸರಿನಲ್ಲಿ ಇನ್ನೊಂದು ಸಿಮ್ (Sim) ಖರೀದಿ ಮಾಡಿದ್ದಾರೆ ಎಂದು ಸಂಸದ ಬಿವೈ ರಾಘವೇಂದ್ರ (BY Raghavendra) ತಿಳಿಸಿದ್ದಾರೆ. ಬಿಜೆಪಿ ಸಂಸ್ಥಾಪನಾ ದಿನ ಹಿನ್ನೆಲೆ ಶಿವಮೊಗ್ಗ ನಗರದ ಹಲವು ಬಿಜೆಪಿ ಬೂತ್ಗಳಿಗೆ ಭೇಟಿ ನೀಡಿದ ಬಳಿಕ ಜೊತೆ ಮಾತನಾಡಿದರು. ರಾಮೇಶ್ವರಂ ಕೆಫೆ ಸ್ಫೋಟ (Rameshwaram Cafe Blast) ಪ್ರಕರಣದಲ್ಲಿ ಎನ್ಐಎ (NIA) ತೀರ್ಥಹಳ್ಳಿಯ (Thirthahalli) ಬಿಜೆಪಿ ಕಾರ್ಯಕರ್ತನನ್ನು ವಿಚಾರಣೆಗೆ ಒಳಪಡಿಸಿದ ವಿಚಾರಕ್ಕೆ ಪ್ರತಿಕ್ರಿಯಿಸಿ,
ತೆರೆಗೆ ಬರಲಿ ಬೆಂಗಳೂರು ನಿರ್ಮಾತೃ ಕೆಂಪೇಗೌಡ ಸಿನಿಮಾ…! ನಿರ್ದೇಶನ ಮಾಡುತ್ತಿರುವುದು ಯಾರು?
ತೀರ್ಥಹಳ್ಳಿ ಬಿಜೆಪಿ (BJP) ಕಾರ್ಯಕರ್ತನನ್ನು ಎನ್ಐಎ ತಂಡ ತನಿಖೆ ವಿಚಾರಣೆಗೆ ಕರೆದೊಯ್ದು 24 ಗಂಟೆಯಲ್ಲಿ ವಾಪಸ್ ಕಳುಹಿಸಿಕೊಟ್ಟಿದ್ದಾರೆ. ಕಾರ್ಯಕರ್ತ ವಾಪಸ್ ಬಂದ ನಂತರ ಆತಂಕದ ವಿಚಾರ ಗೊತ್ತಾಯಿತು. ಹಿಂದೂ ಹುಡುಗರು ಕೊಡುವ ದಾಖಲಾತಿಯನ್ನು ಪೋರ್ಜರಿ ಮಾಡಿ ಸಿಮ್ ಖರೀದಿಸಿ ಇಂತಹ ದುಷ್ಕೃತ್ಯ ಮಾಡುವ ಮನಸ್ಥಿತಿ ಇರುವ ವ್ಯಕ್ತಿಗಳಿಗೆ ಸಿಮ್ ಕೊಡುತ್ತಿದ್ದರು ಎಂದು ಅವರು ತಿಳಿಸಿದರು.