ಆನೇಕಲ್: ನಿಯಂತ್ರಣ ತಪ್ಪಿ ಸುಮಾರು 120 ಅಡಿ ಉದ್ದದ ತೇರು ನೆಲಕ್ಕುರುಳಿದ ಘಟನೆ ಬೆಂಗಳೂರು (Bengaluru) ಹೊರವಲಯದ ಆನೇಕಲ್ (Anekal) ತಾಲೂಕಿನ ಹೀಲಲಿಗೆ (Hilalige) ಗ್ರಾಮದಲ್ಲಿ ನಡೆದಿದೆ. ತೇರು ನೂರಾರು ವರ್ಷಗಳ ಇತಿಹಾಸ ಪ್ರಸಿದ್ಧ ಹುಸ್ಕೂರು ಮದ್ದೂರಮ್ಮ ಜಾತ್ರೆಗೆ ಹೋಗುತ್ತಿತ್ತು. ಹತ್ತಾರು ಊರುಗಳಿಂದ ಹುಸ್ಕೂರಿನ ಮದ್ದೂರಮ್ಮ ಜಾತ್ರೆಗೆ ತೇರು ಬರುತ್ತವೆ.
ತೆರೆಗೆ ಬರಲಿ ಬೆಂಗಳೂರು ನಿರ್ಮಾತೃ ಕೆಂಪೇಗೌಡ ಸಿನಿಮಾ…! ನಿರ್ದೇಶನ ಮಾಡುತ್ತಿರುವುದು ಯಾರು?
ಹೀಲಲಿಗೆ ಗ್ರಾಮದಿಂದ ಹುಸ್ಕೂರಿಗೆ ಬರುತ್ತಿದ್ದ ತೇರು ಕಮ್ಮಸಂದ್ರದ ಹೈಪರ್ ಮಾರ್ಕೆಟ್ ತಿರುವಿನಲ್ಲಿ ಉರುಳಿಬಿದ್ದಿದೆ. ಹುಸ್ಕೂರು ಮದ್ದೂರಮ್ಮ ಜಾತ್ರೆಗೆ ಆಗಮಿಸುತ್ತಿದ್ದ ತೇರು ಎತ್ತುಗಳು ಮತ್ತು ಟ್ರಾಕ್ಟರ್ಗಳ ನೆರವಿನಿಂದ ಎಳೆದು ತರಲಾಗುತ್ತಿತ್ತು. ಅದೃಷ್ಟವಶಾತ್ ಘಟನೆಯಿಂದ ಯಾವುದೇ ಸಾವುನೋವು ಸಂಭವಿಸಿಲ್ಲ.